ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಂಗಾವತಿ
ತಾಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್‌ಶಾಲೆಯಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಅಧ್ಯಕ್ಷ ಸೂರಿಬಾಬು ನೆಕ್ಕಂಟಿಯವರು ಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಕನ್ನಡ ಭಾಷಾ ಶಿಕ್ಷಕರಾದ ಮಂಜುನಾಥ, ಕಿತ್ತೂರು ರಾಣಿ ಚೆನ್ನಮ್ಮನವರ ಬಾಲ್ಯದ ಜೀವನ, ಬ್ರಿಟೀಷರ ವಿರುದ್ಧ ಹೋರಾಡಿದ ಸಂದರ್ಭ, ಹಾಗೂ ತಮ್ಮ ಆಡಳಿತದ ಅವಧಿಯಲ್ಲಿ ಅವರು ಎದುರಿಸಿದ ಸವಾಲುಗಳನ್ನು ಕುರಿತು ವಿವರಿಸಿದರು.
ಸಂಸ್ಥೆಯ ಅಧ್ಯಕ್ಷ ಸೂರಿಬಾಬು ನೆಕ್ಕಂಟಿ ಮಾತನಾಡಿ, ಕಿತ್ತೂರು ಚೆನ್ನಮ್ಮನವರು ಒಬ್ಬ ಮಹಿಳೆಯಾದರೂ ನಾಡಿನ ರಕ್ಷಣೆಗಾಗಿ ಹಾಗೂ ಕಿತ್ತೂರಿನ ಸ್ವಾತಂತ್ರಕ್ಕಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಇಡೀ ಜಗತ್ತಿಗೆ ಸ್ತ್ರೀಶಕ್ತಿ ತೋರಿದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ. ಅವರ ಧೈರ್ಯ, ಸಾಹಸ ಹಾಗೂ ಸಾಧನೆ ಮತ್ತು ನಾಡು ನುಡಿಯ ರಕ್ಷಣೆಗಾಗಿ ಅವರು ಅನುಸರಿಸಿದ ಆದರ್ಶ ಗುಣಗಳನ್ನು ನಾವೆಲ್ಲರೂ ಅನುಸರಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಕೃಷ್ಣವೇಣಿ, ಶಾಲೆಯ ಶಿಕ್ಷಕ ಮತ್ತು ಸಿಬ್ಬಂದಿ ವರ್ಗ ಹಾಗೂ ಪಾಲಕರು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here