ವಿಜಯಸಾಕ್ಷಿ ಸುದ್ದಿ, ತುಮಕೂರು: ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಯುವಕನ ಸಾವಿಗೆ ತಹಸೀಲ್ದಾರ್ ಒಬ್ಬರು ಕಾರಣರಾಗಿದ್ದಾರಾ ಎನ್ನುವ ಅನುಮಾನ ಬರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ.
![](http://vijayasakshi.com/wp-content/uploads/2021/01/img_20210117_22833361680624697440294.jpg)
ಮದ್ಯದ ಮತ್ತಿನಲ್ಲಿ ಹರೀಶ್(25) ಎಂಬ ಯುವಕನಿಗೆ ಪಾವಗಡ ತಹಸೀಲ್ದಾರ್ ನಾಗರಾಜು ಕಾರಿನಿಂದ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
![](http://vijayasakshi.com/wp-content/uploads/2021/01/img_20210117_12882102725648800361551.jpg)
ಪಾವಗಡ-ಮಡಕಶಿರಾ ರಸ್ತೆಯ ರಾಜವಂತಿ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಗಾಯಗೊಂಡಿದ್ದ ಹರೀಶ್ ನನ್ನು ಆಸ್ಪತ್ರೆಗೆ ಸೇರಿಸುವ ಸೌಜನ್ಯವನ್ನೂ ತಹಸೀಲ್ದಾರ್ ನಾಗರಾಜು ತೋರಿಸದೇ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಇದು ರಾಜವಂತಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.