HomeGadag Newsಕುಬೇರಪ್ಪ ಪರ ಶಹರ ಬ್ಲಾಕ್ ಕಾಂಗ್ರೆಸ್ ಪ್ರಚಾರ

ಕುಬೇರಪ್ಪ ಪರ ಶಹರ ಬ್ಲಾಕ್ ಕಾಂಗ್ರೆಸ್ ಪ್ರಚಾರ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಗದಗ-ಬೆಟಗೇರಿ ನಗರದಲ್ಲಿರುವ ಸರಕಾರಿ ಕಚೇರಿಗಳು, ಬ್ಯಾಂಕ್‌ಗಳಲ್ಲಿ ಗದಗ- ಬೆಟಗೇರಿ ಶಹರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಗುರಣ್ಣ ಬಳಗಾನೂರ ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಎಂ. ಕುಬೇರಪ್ಪ ಪರವಾಗಿ ಮತಯಾಚನೆ ಮಾಡಲಾಯಿತು.
ಶಿಕ್ಷಕರ ಹಾಗೂ ಉಪನ್ಯಾಸಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ, ಸ್ನಾತಕೋತ್ತರ ನಿರುದ್ಯೋಗಿ ಪದವಿಧರರು ಉದ್ಯೋಗ ಪಡೆಯಲು ಸರ್ಕಾರ ವಿಧಿಸಿದ್ದ ವಯೋಮಿತಿ ಹೆಚ್ಚಳ ಮಾಡಿಸಿರುವ ಮತ್ತು 40 ವರ್ಷಗಳಿಂದ ಸಾವಿರಾರು ಶಿಕ್ಷಕರ ಹಾಗೂ ಉಪನ್ಯಾಸಕರ ವೈಯಕ್ತಿಕ ಸಮಸ್ಯೆಗಳನ್ನು ಇಲಾಖಾ ಹಂತದಲ್ಲಿ ಬಗೆಹರಿಸಿರುವುದು ಕುಬೇರಪ್ಪ ಅವರ ಸಾಧನೆ ಎಂದು ಮತದಾರರಿಗೆ ವಿವರಿಸಲಾಯಿತು.
ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಭು ಬುರಬುರೆ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಗದಗ ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಫಾರೂಕ ಹುಬ್ಬಳ್ಳಿ, ಗದಗ ವಿಧಾನಸಭಾ ಮತಕ್ಷೇತ್ರದ ಯುವ ಕಾಂಗ್ರೆಸ್ ಡಿಜಿಟಲ್ ಸಂಯೋಜಕ ಮಹಮ್ಮದ ಬೆಟಗೇರಿ ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!