ಕುಮಾರಸ್ವಾಮಿ ಸಿಎಂ ಆದ ಮೇಲೆ ತಾಜ್ ವೆಸ್ಟೆಂಡ್ ಗೆ ಹೋಗಿಲ್ಲ, ಮುಂಚೆಯೇ ಅಲ್ಲಿ ರೂಮ್ ಮಾಡಿಕೊಂಡಿದ್ದರು; ಸಾರಾಗೆ ಸಿದ್ದರಾಮಯ್ಯ ಮರುತ್ತರ

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ಸಿದ್ದರಾಮಯ್ಯ ಒಳ ಒಪ್ಪಂದಗಳ ಜನಕ ಎಂಬ ಮಾಜಿ‌‌ ಸಿಎಂ ಕುಮಾರಸ್ವಾಮಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತಿರಿಸಿರುವ ಅವರು, ಅವನು ಹೇಳಿದ್ದಕ್ಕೆಲ್ಲಾ ನಾನು ಪ್ರತಿಕ್ರಿಯೆ ಕೊಡಲ್ಲ. ಚಾಮುಂಡೇಶ್ವರಿಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು ನಿಜ. ನಾನು ಅದನ್ನೇ ಹೇಳಿದ್ದೇನೆ.
ಬಾದಾಮಿಯಲ್ಲಿ ಬಿಜೆಪಿ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಆಯ್ಕೆ ಮಾಡಿಕೊಂಡ ಕೆಲವೇ ಕ್ಷೇತ್ರಗಳಲ್ಲಿ ಒಪ್ಪಂದ ಮಾಡಿಕೊಂಡಿದ್ದವು ಎಂದು ಆರೋಪಿಸಿದರು.

ಗೋಪಾಲ್ ಗೆ ಟಿಕೆಟ್ ಕೊಟ್ಟು ನಿಲ್ಲಿಸಿದ್ದು ಯಾರು? ಯಾರು ಒಳ ಒಪ್ಪಂದ ಮಾಡಿಕೊಂಡಿದ್ದರು ಎಂದು ಎಲ್ಲರಿಗೂ ಗೊತ್ತಿದೆ.
ಅವರು ಹೇಳಿದ್ದಕ್ಕೆಲ್ಲಾ ನಾನು ಉತ್ತರ ಕೊಡಲ್ಲ ಎಂದರು.

ತಾಜ್ ವೆಸ್ಟೆಂಡ್ ನಲ್ಲಿ ಇರಲು ಸಿದ್ದರಾಮಯ್ಯ ಕಾರಣವೆಂಬ ಸಾರಾ ಮಹೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,
ಕುಮಾರಸ್ವಾಮಿ ಸಿಎಂ ಆದ ಮೇಲೆ ತಾಜ್ ವೆಸ್ಟೆಂಡ್ ಗೆ ಹೋಗಿದ್ದಲ್ಲ. ಅದಕ್ಕಿಂತ ಮುಂಚೆಯೇ ಅಲ್ಲಿ ರೂಮ್ ಮಾಡಿಕೊಂಡಿದ್ದರು ಎಂದು ಮರುತ್ತರ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಗೆ ಪಕ್ಷದ ಮುಖಂಡರು ಕಾರಣವೆಂದು ಹೇಳಿದ್ದೇನೆ. ಇದು ಚಾಮುಂಡೇಶ್ವರಿ ಕ್ಷೇತ್ರದ ವಿಚಾರ. ಅಲ್ಲಿಯವರ ಬಗ್ಗೆ ನಾನು ಹೇಳಿರುವುದು. ಪಕ್ಷದವರೇ ನನ್ನನ್ನು ಸೋಲಿಸಿದರು ಎಂದು ಮಾಜಿ‌ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.


Spread the love

LEAVE A REPLY

Please enter your comment!
Please enter your name here