ಕುಸಿದ ಮನೆಗಳ ನಷ್ಟ ವೀಕ್ಷಿಸಿದ ಇಂಜಿನಿಯರ್

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಅವುಗಳ ನಷ್ಟ ಪ್ರಮಾಣವನ್ನು ಗದಗನ ಪಂಚಾಯಿತ್ ರಾಜ್ ಇಂಜಿನಿಯರ ವಿಭಾಗದ ಇಂಜಿನಿಯರ ಮಂಜುನಾಥ ಕಲಬುರ್ಗಿ ವೀಕ್ಷಿಸಿದರು.
ಮಂಗಳವರ ಗ್ರಾಮಕ್ಕೆ ಭೇಟಿ ನೀಡಿ ಸುಮಾರು ೧೫ ಮನೆ ಗೋಡೆ ಕುಸಿದು ಬಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಮಾತನಾಡಿದ ಅವರು, ಶೇಕಡಾ ೫೦ ಹಾನಿ ಸಂಭವಿಸಿದ್ದು, ಈ ವರದಿಯನ್ನು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಲಾಗುವುದು. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ ಮತ್ತು ಕಂದಾಯ ನಿರೀಕ್ಷಕರು ತಹಸೀಲ್ದಾರ್ ಸಮ್ಮುಖದಲ್ಲಿ ನಷ್ಟ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮ ಮಾಡುತ್ತಾರೆ ಎಂದರು.
ಗ್ರಾ.ಪಂ ಮಾಜಿ ಉಪಾಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ, ಮಾತನಾಡಿ ತಿಮ್ಮಾಪುರ ಗ್ರಾಮಕ್ಕೆ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಹಳೆಯ ಮಣ್ಣಿನ ಮನೆಗಳು ಹೆಚ್ಚಿ ಪ್ರಮಾಣದಲ್ಲಿ ಇದ್ದು, ಭಾರಿ ಮಳೆಗೆ ಅವುಗಳ ಗೋಡೆ ಕುಸಿದು ಬಿದ್ದು ಭಾಗಶಃ ಹಾನಿಯಾಗಿದ್ದು ಕಂದಾಯ ಇಲಾಖೆ ಬೇಗನೆ ಸಂತ್ರಸ್ತರಿಗೆ ಪರಿಹಾರ ಧನವನ್ನು ನೀಡಬೇಕು ಎಂದು ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here