ಕೃಷಿ ಮಸೂದೆ ಬಗ್ಗೆ ಬಿಜೆಪಿಯಿಂದ ಜನಜಾಗೃತಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ಬಗ್ಗೆ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಜನಜಾಗೃತಿ ಅಭಿಯಾನ ಆರಂಭಿಸಲಾಗಿದೆ. ಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಿಂದ ಗ್ರಾಮ ಮಟ್ಟದ ವರೆಗೂ ಜನಜಾಗೃತಿ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಷಣ್ಮುಖ ಗುರಿಕಾರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರೈತ ಮೋರ್ಚಾದಿಂದ ಅ. ೧೦ರಿಂದ ೩೧ರ ವರೆಗೆ ಮೂರು ಹಂತದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅ. ೧೮ರಿಂದ ೨೪ರ ವರೆಗೆ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳಿಂದ ಮಂಡಲಗಳ ಪದಾಧಿಕಾರಿಗಳ ಮೂಲಕ ಗ್ರಾಮಸಭೆ ನಡೆಸಿ ಕೃಷಿ ಮಸೂದೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಈ ಅಭಿಯಾನದಲ್ಲಿ ಟ್ರ್ಯಾಕ್ಟರ್, ಭೂಮಿಪೂಜೆ, ದಾನ್ಯಪೂಜೆ ಹಾಗೂ ಗೋಮಾತೆ ಪೂಜೆಗಳ ಮೂಲಕ ರೈತರ ಸ್ವಾಭಿಮಾನವನ್ನು ಪ್ರೇರೆಪಿಸಲಾಗುವುದು. ಗ್ರಾಮೀಣ ಜನರಿಗೆ ಕೇಂದ್ರ ಸರಕಾರದ ಕೃಷಿ ಮಸೂಧೆಗಳ ಮಹತ್ವವನ್ನು ಮನದಟ್ಟು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ, ಎಂ.ಎಸ್.ಕರಿಗೌಡ್ರ, ಕಾಂತೀಲಾಲ ಬನ್ಸಾಲಿ ಇತರರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here