ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡರಿಗೆ ಫಿಟ್ಸ್ ಬಂದು ಮೂರ್ಚೆ ಹೋದ ಘಟನೆ ಇಂದಿಲ್ಲಿ ನಡೆದಿದೆ.
ನಗರದ ನವೀನ್ ರೆಸಿಡೆನ್ಸಿ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಚಿತ್ರದುರ್ಗಕ್ಕೆ ಬಂದಿದ್ದರು.

ಕಾರಿನಿಂದ ಇಳಿಯುತ್ತಿದ್ದ ವೇಳೆ ಪಿಟ್ಸ್ ಬಂದು ಮೂರ್ಚೆಹೋದ ಸದಾನಂದಗೌಡರನ್ನು ಅವರ ಅಂಗರಕ್ಷಕರು ಕೂಡಲೇ ಎಸ್ಕಾರ್ಟ್ ವಾಹನದಲ್ಲಿ ಬಸವೇಶ್ವರ ಆಸ್ಪತ್ರೆಗೆ ಕರೆದೊಯ್ದರು.
ಬಸವೇಶ್ವರ ಆಸ್ಪತ್ರೆಯ ವೈದ್ಯರು, ಸದಾನಂದಗೌಡರಿಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಸಚಿವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನುವ ಮಾಹಿತಿ ದೊರೆತಿದೆ.