ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕೇಂದ್ರ ಸರ್ಕಾರ ಇತ್ತೀಚೆಗೆ ತಿದ್ದುಪಡಿ ಮಾಡಿರುವ ಭೂಸುಧಾರಣೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಲ್ಯಾಣ ನಿಧಿ ಕಾಯ್ದೆ ವಿರೋಧಿಸಿ ಜಿಲ್ಲಾದ್ಯಂತ ರೈತರು ಪ್ರತಿಭಟನೆ ನಡೆಸಿದರು.
ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕೇವಲ ಗದಗ ನಗರವಲ್ಲದೇ, ಜಿಲ್ಲೆಯ ಮುಂಡರಗಿ, ಗಜೇಂದ್ರಗಡ, ಲಕ್ಷ್ಮೇಶ್ವರ ಪಟ್ಟಣದಲ್ಲೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಅಂಗವಾಗಿ ನಗರದಲ್ಲಿ ಹಾದು ಹೋಗಿರುವ ಹುಬ್ಬಳ್ಳಿ- ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ, ಅರಭಾವಿ – ಚಳ್ಳಕೇರಿ ರಾಜ್ಯ ಹೆದ್ದಾರಿ ತಡೆದು, ಮಾನವ ಸರಪಳಿ ನಿರ್ಮಾಣ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು.