ಕೈಗೆ ಬಂದ ತುತ್ತು ಬಾಯಿಗೆ ಬರ್ತಿಲ್ಲ; ಕಳ್ಳರ ಕಾಟಕ್ಕೆ ರೈತರ ಕಣ್ಣೀರು

0
Spread the love

ವಿಜಯಸಾಕ್ಷಿ ಸುದ್ದಿ, ಕೋಲಾರ

ಜಿಲ್ಲೆಯಲ್ಲಿ ಆಲೂಗಡ್ಡೆ ಕಳ್ಳರು ಹೆಚ್ಚುತ್ತಿದ್ದಾರೆ. ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಆಲೂಗಡ್ಡೆ ಮೂಟೆಗಳನ್ನು ಕದ್ದೊಯ್ಯುತ್ತಿದ್ದು,
ಆಲೂಗಡ್ಡೆ ಬೆಳೆರಕ್ಷಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಉಕ್ಕುಂದ ಗ್ರಾಮದ ರೈತ ಕೃಷ್ಣಪ್ಪ ಅವರಿಗೆ ಸೇರಿದ ತೋಟದಲ್ಲಿದ್ದ 20 ಮೂಟೆ ಹಾಗೂ ಬೂದಿಕೋಟೆ ಗ್ರಾಮದ ರೈತ ವೆಂಕಟೇಶ್ ಶೆಟ್ಟಿಗೆ ಸೇರಿದ 15 ಮೂಟೆ ಆಲೂಗಡ್ಡೆ ಕಳ್ಳತನ ಮಾಡಿದ್ದಾರೆ.

ಕಳೆದ ವಾರದ ಹಿಂದಷ್ಟೇ ಬಂಗಾರಪೇಟೆ ತಾಲ್ಲೂಕಿನ ಗಾಜಗ ಗ್ರಾಮದ ಮಂಜುನಾಥ್ ರೆಡ್ಡಿ ಎಂಬ ರೈತನಿಗೆ ಸೇರಿದ ಆಲೂಗಡ್ಡೆ ಬೆಳೆ ಕದ್ದೊಯ್ದಿದ್ದರು.

ಫಸಲು ಬಂದು ಇನ್ನೇನೂ ಬೆಳೆ ಕೀಳುವ ಸಮಯದಲ್ಲಿಯೇ ಖದೀಮರು ಇಂತಹ ದುರ್ಷ್ಕತ್ಯಗೈಯುತ್ತಿದ್ದು,
ಸಾಲ ಮಾಡಿ ಬೆಳೆ ಬೆಳೆದಿದ್ದ ರೈತನಿಗೆ ಆಘಾತವುಂಟಾಗುತ್ತಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇದರಿಂದ ರೈತರು ಕಣ್ಣೀರಿಡುತ್ತಿದ್ದಾರೆ.

ಬೆಳೆಗಳಿಗೆ ರಕ್ಷಣೆ ನೀಡುವಂತೆ ರೈತರು ಪೋಲಿಸರಿಗೆ ಮನವಿ ಮಾಡಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here