ಕೊಪ್ಪಳ ಎಸ್ಪಿ ಜಿ.ಸಂಗೀತಾ ವರ್ಗಾವಣೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಟಿ.ಶ್ರೀಧರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಜಿ.ಸಂಗೀತಾ ಅವರನ್ನು ವರ್ಗಾವಣೆಗೊಳಿಸಿದೆ. ಸಂಗೀತಾ ಅವರ ವರ್ಗಾವಣೆಗೊಳ್ಳುವ ವಿಚಾರ ಕಳೆದೊಂದು ವಾರದಿಂದ ಚಾಲ್ತಿಯಲ್ಲಿತ್ತು. ನೂತನವಾಗಿ ಎಸ್ಪಿಯಾಗಿ ನೇಮಕಗೊಂಡಿರುವ ಟಿ.ಶ್ರೀಧರ್ ಅವರು ಈ ಮೊದಲು ಬೆಂಗಳೂರು ಗುಪ್ತಚರ ವಿಭಾಗದಲ್ಲಿದ್ದ ಕರ್ತವ್ಯ ನಿರ್ವಹಿಸಿದ್ದರು.

ಎಸ್ಪಿ ಜಿ.ಸಂಗೀತಾ ಮತ್ತು ಇತರ ಪೊಲೀಸ್ ಅಧಿಕಾರಿಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇತ್ತು. ಕೊನೆಗೂ ಈ ತೆರೆಮರೆಯ ಕಸರತ್ತು ಬಿಜೆಪಿ ಜನಪ್ರತಿನಿಧಿಗಳ ಅಂಗಳಕ್ಕೆ ಹೋಗಿತ್ತು. ಬಳಿಕ ಬಿಜೆಪಿ ನಾಯಕರಲ್ಲೇ ಈ ವಿಷಯವಾಗಿ ಬಣಗಳು ಹುಟ್ಟಿಕೊಂಡಿದ್ದವು. ಕೊನೆಗೂ ಒಂದು ಬಣ ಸಂಗೀತಾ ಅವರನ್ನು ಎತ್ತಂಗಡಿ ಮಾಡುವಲ್ಲಿ ಯಶಸ್ವಿಯಾಗಿದೆ.


Spread the love

LEAVE A REPLY

Please enter your comment!
Please enter your name here