ಕೊಪ್ಪಳ ಜಿಲ್ಲೆಯಲ್ಲಿ ಪವರ್; ಕೊರೋನಾ ತಿಳಿವಳಿಕೆ ನೀಡಿ, ಅಂಜನಾದ್ರಿ ಬೆಟ್ಟ ಏರಿದ ಪುನೀತ್

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಜಿಲ್ಲೆಯ ಗಂಗಾವತಿ, ಮಲ್ಲಾಪುರ ಸುತ್ತಮುತ್ತ ಹಾಗೂ ಹೊಸಪೇಟೆ ಅಕ್ಕ ಪಕ್ಕದ ಸ್ಥಳಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ.

ಗುರುವಾರ ಬೆಳಗ್ಗೆ ಚಿತ್ರೀಕರಣದಲ್ಲಿ ಪಾಲ್ಗೊಂಡ ಬಳಿಕ ಪೊಲೀಸ್ ಇಲಾಖೆಯ ಮನವಿ ಮೇರೆಗೆ ಪವರ್ ಸ್ಟಾರ್ ಪುನೀತ್ ಅವರು, ಕೊರೋನಾ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಪಾಲಿಸಬೇಕಾದ ನಿಯಮಗಳ ಕುರಿತು ತಿಳಿವಳಿಕೆ ನೀಡಿದರು. ನಂತರ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಅಂಜನಾದ್ರಿ ಬೆಟ್ಟ ಏರಿ ಆಂಜನೇಯನ ದರ್ಶನ ಪಡೆದರು.

ತಮ್ಮ‌ ಮೆಚ್ಚಿನ ನಟ ಅಪ್ಪು ಅವರನ್ನು ಕಣ್ತುಂಬಿಕೊಳ್ಳಲು ಮಲ್ಲಾಪುರ ಹಾಗೂ ಅಂಜನಾದ್ರಿ ಬೆಟ್ಟದ ಬಳಿ ಜನಸಾಗರವೇ ಸೇರಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.


Spread the love

LEAVE A REPLY

Please enter your comment!
Please enter your name here