ಕೊರೊನಾ ತೊಲಗಲಿ; ದತ್ತನಿಗೆ ಮೂರು ದಿನಗಳ ವಿಶೇಷ ಪೂಜೆ!

0
Spread the love

ವಿಜಯಸಾಕ್ಷಿ ಸುದ್ದಿ, ಕಲಬುರಗಿ

Advertisement

ಸದ್ಯ ದೇಶವನ್ನು ಕೊರೊನಾ ಕಾಡುತ್ತಿದೆ. ಹೀಗಾಗಿ ಎಲ್ಲೆಡೆ ವಾರಿಯರ್ಸ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರ ನಡುವೆ ಹಲವರು ದೇವರ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಸುಕ್ಷೇತ್ರ ಗಾಣಗಾಪೂರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ವಿಶೇಷ ಪೂಜೆ ಕೈಗೊಳ್ಳಲಾಗಿದೆ. ಮೂರು ದಿನಗಳ ಕಾಲ ರುದ್ರಾಭಿಷೇಕ ಕೈಗೊಳ್ಳಲಾಗಿತ್ತು. ಅದು ಇಂದು ಮುಕ್ತಾಯವಾಗಿದೆ.ಕೊರೊನಾ ತೊಲಗಲಿ ಎಂಬ ಕಾರಣಕ್ಕೆ ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಮೂರು ದಿನಗಳ ಕಾಲ ನಿರಂತರವಾಗಿ ಧಾರ ರುದ್ರಾಭೀಷೇಕ ನಡೆದಿದೆ. ಅಲ್ಲದೇ, ಮೂರು ದಿನಗಳ ಕಾಲ ನಿರಂತರವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದಿವೆ.

ಜಗತ್ತಿಗೆ ಎದುರಾದ ದೊಡ್ಡ ಕಂಟಕ ಕೊರೊನಾ ನಿರ್ಮೂಲನೆಗೆ ಪ್ರಾರ್ಥಿಸಿ ಪೂಜೆ, ಹೋಮ ಹವನ, ರುದ್ರಾಭೀಷೇಕ, ಪಾರಾಯಣ ಮಾಡಲಾಗಿದೆ. ದೇವಸ್ಥಾನದಲ್ಲಿನ 10ಕ್ಕೂ ಹೆಚ್ಚು ಅರ್ಚಕರಿಂದ ಪೂಜಾ ಕೈಂಕರ್ಯಗಳು ನಡೆದಿವೆ.


Spread the love

LEAVE A REPLY

Please enter your comment!
Please enter your name here