ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯ ಜನರಿಗೆ ಶುಕ್ರವಾರ ಶುಭದಿನವಾಗಿ ಪರಿಣಮಿಸಿದೆ. ಹೌದು ಕಳೆದ ಶುಕ್ರವಾರ ಶುಭ ಸುದ್ದಿ ನೀಡಿದ್ದ ಜಿಲ್ಲಾಡಳಿತ ಈ ಶುಕ್ರವಾರವೂ ಜಿಲ್ಲೆಯ ಜನರಿಗೆ ನೆಮ್ಮದಿ ಮೂಡಿಸುವ ಮಾಹಿತಿ ನೀಡಿದೆ.
ಇಂದು 66 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ ಮೂವರು ಮೃತಪಟ್ಟಿದ್ದಾರೆ.
ಇಂದು 66 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 25264 ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -46, ಮುಂಡರಗಿ-02, ನರಗುಂದ-03, ರೋಣ-07, ಶಿರಹಟ್ಟಿ-06, ಹೊರಜಿಲ್ಲೆಯ-02 ಸೇರಿದಂತೆ 66 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 285 ಕ್ಕೇರಿದೆ.
ಜಿಲ್ಲೆಯ ಲಕ್ಷ್ಮೇಶ್ವರ ನಿವಾಸಿ 66 ವರ್ಷದ ಮಹಿಳೆ ಮೇ 30 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -09 ರಂದು ಮೃತಪಟ್ಟಿದ್ದಾರೆ.
ಜಿಲ್ಲೆಯ ಮುಂಡರಗಿಯ ಅಂಬೇಡ್ಕರ್ ನಗರ ನಿವಾಸಿ 65 ವರ್ಷದ ವ್ಯಕ್ತಿ ಜೂನ್- 09 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 09 ರಂದೇ ಮೃತಪಟ್ಟಿದ್ದಾರೆ.
ರೋಣ ತಾಲೂಕಿನ ಗೋಗೇರಿ ನಿವಾಸಿ 65 ವರ್ಷದ ವ್ಯಕ್ತಿ ಮೇ-24 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಜೂನ್ -09 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ.
ಇಂದು 174 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 24034 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 945 ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 98 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.