ಕೊರೊನಾ ಸೋಂಕು ಮನುಕುಲಕ್ಕೆ ಮಾರಕ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಕೊರೊನಾ ಸೋಂಕು ಜಾಗತಿಕವಾಗಿ ಮಾನವ ಕುಲಕ್ಕೆ ಮಾರಕವಾಗಿದ್ದು, ನಮ್ಮ ಜೀವ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವ್ಯಕ್ತಿಗತ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ಸೋಂಕು ನಿಯಂತ್ರಿಸಲು ಸಾರ್ವಜನಿಕರು ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ ಪಾಟೀಲ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗದಗ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್ ಸಹಯೋಗದಲ್ಲಿ ನಡೆದ ಕೋವಿಡ್-೧೯ ಜನಾಂದೋಲನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋವಿಡ್-19 ಸೋಂಕಿಗೆ ಸದ್ಯ ಔ?ಧ ಇಲ್ಲದಿರುವ ಕಾರಣ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಸುರಕ್ಷಿತವಾಗಿರಲು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೊನಾ ನಿಯಂತ್ರಿಸಬೇಕು. ಆಗಾಗ ಸೋಪು ಹಾಗೂ ನೀರಿನಿಂದ ಕೈ ತೊಳೆದುಕೊಳ್ಳುವ ಮೂಲಕ ಕೋವಿಡ್‌ನಿಂದ ದೂರವಿರಬೇಕು. ನಾವು ಸುರಕ್ಷಿತವಾಗಿದ್ದು, ಇತರರನ್ನೂ ಸುರಕ್ಷಿತವಾಗಿರಿಸಬೇಕು ಎಂದರು.
ಜನಸಂದಣಿ ಇರುವ ಪ್ರದೇಶಗಳಲ್ಲಿ ಜಾಗೃತರಾಗಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್‌ಗೆ ಸಂಬಂಧಿಸಿದ ಯುಕ್ತವಾದ ವರ್ತನೆಯನ್ನು ಅನುಸರಿಸುವುದರ ಜತೆಗೆ ಬೇರೆಯವರು ಅದನ್ನು ಅನುಸರಿಸುವಂತೆ ಉತ್ತೇಜನ ನೀಡಬೇಕು. ಈ ಮೂಲಕ ಮಾರಣಾಂತಿಕ ವೈರಾಣು ಹರಡುವುದನ್ನು ತಡೆಗಟ್ಟಬೇಕು ಎಂದು ನ್ಯಾ| ಪಾಟೀಲ ಹೇಳಿದರು.
ಕೋವಿಡ್-19 ತಡೆಗಟ್ಟವ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿಲ್ಲಾ ಪೊಲೀಸ್ ವರಿ?ಧಿಕಾರಿ ಯತೀಶ್ ಎನ್., ಅಪರ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಂ.ವಿ. ನರಸಿಂಹಸಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸತೀಶ್ ಬಸರೀಗಿಡದ, ಜಿಲ್ಲಾ ನ್ಯಾಯವಾದಿಗಳ ಸಂಘ, ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here