ವಿಜಯಸಾಕ್ಷಿ ಸುದ್ದಿ, ಗದಗ
ಮೇ 05 ಬುಧವಾರ ಜಿಲ್ಲೆಯಲ್ಲಿ ಕೊರೋನಾ ಸೋಂಕು ತನ್ನ ಅಟ್ಟಹಾಸ ಮುಂದುವರಿಸಿದೆ. ಸತತ ಮೂರನೇ ದಿನವೂ ಎರಡು ನೂರರ ಗಡಿ ಸಮೀಪದಲ್ಲಿ ಬಂದು ನಿಂತಿದೆ. ಅದರಲ್ಲೂ ಸೋಂಕಿಗೆ ಮೂವರು ಮೃತಪಟ್ಟಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.
ಇಂದಿನ 189 ಜನರಿಗೆ ಸೋಂಕು ತಗುಲುವ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13596 ಪಾಸಿಟಿವ್ ಪ್ರಕರಣಗಳು ದೃಢಪಟ್ಟಂತಾಗಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -118 , ಮುಂಡರಗಿ-16, ನರಗುಂದ-14, ರೋಣ-33, ಶಿರಹಟ್ಟಿ-02, ಹೊರಜಿಲ್ಲೆಯ-06 ಸೇರಿದಂತೆ 189 ಪ್ರಕರಣಗಳು ದೃಢಪಟ್ಟಿವೆ.
ರಾಜ್ಯ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಿಂದಾಗಿ ಮೂವರು ಮೃತಪಟ್ಟಿದ್ದಾರೆ. ಗದಗನ ಸಿಡಿಒ ಜೈನ ಶಾಲೆಯ ಹತ್ತಿರದ 65, ಮೇ 02 ರಂದು ಖಾಸಗಿ ಆಸ್ಪತ್ರೆಯಲ್ಲಿ, ಬೆಟಗೇರಿಯ 60 ವರ್ಷದ ಪುರುಷ ಮೇ.1 ರಂದು ಜಿಮ್ಸ್ ನಲ್ಲಿ, ಹಾಗೂ ಜಿಲ್ಲೆಯ ಲಕ್ಷ್ಮೇಶ್ವರ ದ 78 ವರ್ಷದ ಮಹಿಳೆ ಮೇ 04 ರಂದು ಜಿಮ್ಸ್ ನಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ.
ಇದರಿಂದಾಗಿ ಇದುವರೆಗೂ ಜಿಲ್ಲೆಯಲ್ಲಿ
147 ಜನರು ಸೋಂಕಿಗೆ ಬಲಿಯಾದಂತಾಗಿದೆ.
ಇಂದು 123 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 12521 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 928 ಪ್ರಕರಣಗಳು ಸಕ್ರಿಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 213 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.