ಕೊರೋನಾ ವಾರಿಯರ್ಸ್‌ ಗೆ ಪರಿಹಾರ ಕೊಡಲು ಸರ್ಕಾರ ಕುಂಟು ನೆಪ: ವರಲಕ್ಷ್ಮೀ ಆರೋಪ

0
Spread the love

ವಿಜಯಸಾಕ್ಷಿ ಸುದ್ದಿ, ಉಡುಪಿ

ಕೊರೋನಾ ಅವಧಿಯಿಂದ
ಇಲ್ಲಿಯ ತನಕ 27 ಜನ ಅಂಗನವಾಡಿ ಕಾರ್ಯಕರ್ತೆಯರು ಮೃತ ಪಟ್ಟಿದ್ದಾರೆ. ಆದರೆ, 26 ಮಂದಿಗೆ ರಾಜ್ಯ ಸರ್ಕಾರ ಪರಿಹಾರ ನೀಡದೆ ಕುಂಟು ನೆಪ ಹೇಳುತ್ತಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯನ್ನು ಕೊರೋನಾ ವಾರಿಯರ್ ಎಂದು ಹೇಳಲಾಗುತ್ತಿದೆ. ಆದರೆ, ಸಾವನ್ನಪ್ಪಿರುವ ವಾರಿಯರ್ ಗಳಿಗೆ ಇನ್ನೂವರೆಗೂ ಪರಿಹಾರ ಸಿಕ್ಕಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

ಬಿಸಿಯೂಟ ನೌಕರರಿಗೆ 2600 ರೂ. ಸಂಬಳ ಪಡೆಯುತ್ತಿದ್ದು,
ಸೆಪ್ಟೆಂಬರ್ ನಿಂದ ಸಂಬಳ ಕೊಟ್ಟಿಲ್ಲ. ನಾಲ್ಕು ತಿಂಗಳ ಸಂಬಳ ಬಾಕಿ ಉಳಿಸಿಕೊಂಡಿದೆ. ಎಲ್ಲ ಕೆಲಸಗಳನ್ನು ಮಾಡಿಸಿ ಅನ್ಯಾಯವೆಸಗಿದೆ ಎಂದು ದೂರಿದರು.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆಯಷ್ಟೇ ಸಿಗುತ್ತಿದ್ದು, ಬೇಡಿಕೆ ಈಡೇರದಿದ್ದರೆ ಬಜೆಟ್ ಅಧಿವೇಶನ ಸಂದರ್ಭದಲ್ಲಿ ವಿಧಾನಸೌಧ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ರಾಜ್ಯ ಸರ್ಕಾರವನ್ನು ವರಲಕ್ಷ್ಮೀ
ಎಚ್ಚರಿಸಿದರು.


Spread the love

LEAVE A REPLY

Please enter your comment!
Please enter your name here