ಕೊರೋನಾ ಹೊಸ ವೈರಸ್; ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ಕೊರೋನಾ ರೂಪಾಂತರ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ವೈರಸ್ ತಡೆಗಟ್ಟುವ ಸಲುವಾಗಿ ಇಂದಿನಿಂದ ಜನವರಿ 2 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಕೋವಿಡ್ ಸಲಹಾ ಸಮಿತಿ ಸಭೆಯ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇವತ್ತಿನಿಂದ ಒಂಬತ್ತು ದಿನಗಳವರಗೆ ರಾತ್ರಿ ಕರ್ಪ್ಯೂ ಜಾರಿ ಇರಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಸೇವೆಗಳು ಬಂದ್ ಆಗಿರಲಿವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಇಂದಿನಿಂದ ಜನವರಿ 2 ರವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರಲಿದೆ. ಈ ವೇಳೆ ಯಾರೂ ಅನಾವಶ್ಯಕವಾಗಿ ಹೊರಗಡೆ ಬರಬಾರದು. ಕ್ರಿಸ್ ಮಸ್, ಹೊಸ ವರ್ಷ ಹಬ್ಬದ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಏರ್ ಪೋರ್ಟ್ ಗಳಲ್ಲಿ ಪ್ರತಿ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆ ಮಾಡಲಾಗುವುದು. ಇನ್ನು ಬ್ರಿಟನ್ ನಿಂದ ಬಂದ ಪ್ರಯಾಣಿಕರನ್ನು 28 ದಿನಗಳವರೆಗೆ ಹೋಂ ಕ್ವಾರಂಟೈನ್ ಇರಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here