ಕೊಲೆಯಾದ ಯುವಕನ ಗುರುತು ಪತ್ತೆ; ಹಂತಕರ ಪತ್ತೆಗಾಗಿ ಬಲೆ ಬೀಸಿದ ಪೊಲೀಸರು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

ಮುಳಗುಂದ ರಸ್ತೆಯ ಈಚಲ ಹಳ್ಳದಲ್ಲಿ ನಿನ್ನೆ ಪತ್ತೆಯಾಗಿದ್ದ ಯುವಕನ ಶವದ ಗುರುತು ಪತ್ತೆಯಾಗಿದ್ದು, ನಗರದ ಗಂಗಿಮಡಿ ಆಶ್ರಯ ಕಾಲೋನಿಯ ನಿವಾಸಿ ರಮೇಶ್ ಹುಳಕಣ್ಣವರ ಎಂದು ತಿಳಿದು ಬಂದಿದೆ.

ರಮೇಶ್ ನ ಕುತ್ತಿಗೆಗೆ ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾರೆ. ಅಲ್ಲದೇ, ಕೊಲೆಯಾಗಿರುವ ಯುವಕನ ಮೃತದೇಹವನ್ನು ದುಷ್ಕರ್ಮಿಗಳು ಈಚಲ ಹಳ್ಳದ ಬ್ರಿಡ್ಜ್ ಕೆಳಗೆ ರವಿವಾರ ತಡರಾತ್ರಿ ಎಸೆದು ಹೋಗಿದ್ದರು. ಸೋಮವಾರ ಸಂಜೆ ಯುವಕನ ಶವ ಪತ್ತೆಯಾಗಿತ್ತು.

ಇದನ್ನೂ ಓದಿ ಯುವಕನ ಕೊಲೆ; ಬ್ರಿಡ್ಜ್ ಕೆಳಗೆ ಶವ ಎಸೆದು ಹೋದ ದುಷ್ಕರ್ಮಿಗಳು

ರಮೇಶ್ ಆಟೋ ಚಾಲಕನಾಗಿದ್ದು, ಅವನ ಸ್ನೇಹಿತನೇ ಕರೆದುಕೊಂಡು ಹೋಗಿ ಹತ್ಯೆ ಮಾಡಿಸಿರಬಹುದು ಎಂದು ಶಂಕಿಸಲಾಗಿದೆ.

ಇನ್ನು ಪ್ರೇಮ ಕಲಹ ಅಥವಾ ಹಣಕಾಸಿನ ವ್ಯವಹಾರಗಳಲ್ಲಿ ರಮೇಶ್ ಭಾಗಿಯಾಗಿದ್ದನೇ
ಎಂಬ ಎಲ್ಲಾ ಆಯಾಮಗಳನ್ನಿಟ್ಟುಕೊಂಡು ಮೃತ ಯುವಕನ ಕುಟುಂಬದವರ ಮಾಹಿತಿ ಆಧರಿಸಿ ಪೊಲೀಸರು ಹಂತಕರ ಪತ್ತೆಗಾಗಿ ಬಲೆ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here