ಕೊವಿಡ್-19 ಸಂತ್ರಸ್ತ ಕಾರ್ಮಿಕರ ನೆರವಿಗೆ ಸಂಸದ ಕರಡಿ ಸಂಗಣ್ಣ ಸ್ಪಂದನೆ: ಕಾರ್ಮಿಕ ಇಲಾಖೆಯಿಂದ ಆಹಾರ ಸಾಮಾಗ್ರಿ ಕಿಟ್ ನೀಡಲು ಸಚಿವ ಶಿವರಾಂ ಹೆಬ್ಬಾರ್ ಗೆ ಮನವಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ :
ಕೊವಿಡ್-19 ಲಾಕ್ ಡೌನ್ ಸಂದರ್ಭದಿಂದ ಇಲ್ಲಿಯವರೆಗೂ ಸರಿಯಾದ ಉದ್ಯೋಗ ಸಿಗದೆ ಸಂಕಷ್ಟದಲ್ಲಿರುವ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪಗತಿಯಲ್ಲಿ ಬರುವ ಸಾವಿರಾರು ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರ ನೆರವಿಗೆ ಸ್ಪಂದಿಸಿರುವ ಸಂಸದ ಕರಡಿ ಸಂಗಣ್ಣ ಅವುರು ಕಾರ್ಮಿಕ ಇಲಾಖೆಯಿಂದ ಆಹಾರ ಸಾಮಾಗ್ರಿ ಕಿಟ್ ಗಳನ್ನು ನೀಡುವುಂತೆ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದಿಂದ ಸಿಗುವ ಸೌಲಭ್ಯಗಳೊಂದಿಗೆ ಇತರ ದಾನಿಗಳ ನೆರವಿನೊಂದಿಗೆ ಕೃಷಿ ಕೂಲಿಕಾರರು, ಕಾರ್ಮಿಕರು, ಬಡವರಿಗೆ ದಿನಸಿ ಕಿಟ್ ಗಳು ಸೇರಿದಂತೆ ಇತರೆ ಸಹಾಯಹಸ್ತ ನೀಡಿರುವ ಸಂಸದರು ಕಾರ್ಮಿಕ ಇಲಾಖೆಯಿಂದ ಲೋಕಸಭಾ ಕ್ಷೇತ್ರದಲ್ಲಿರುವ ಸುಮಾರು 25 ಸಾವಿರ ಕಟ್ಟಡ ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರುಗಳಿಗೆ ಕೊವಿಡ್-19 ಪೂರ್ವದಲ್ಲಿದ್ದಂತೆ ಪ್ರತಿನಿತ್ಯ ಉದ್ಯೋಗ ಸಿಗದೆ ಜೀವನ ನಿರ್ವಹಣೆ ಮಾಡಲು ಕಷ್ಟಸಾಧ್ಯವಾಗಿರುವದರಿಂದ ಆಹಾರ ಧ್ಯಾನ್ಯ ಸಾಮಾಗ್ರಿ ದಿನಸಿ ಕಿಟ್ ಗಳನ್ನು ಇಲಾಖೆಯಿಂದ ನೀಡಲು ಕೋರಿದ್ದಾರೆ.

ಕೋಟ್

ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಜಿಲ್ಲೆಯ ಹಾಗೂ ಲೋಕ ಸಭಾ ಕ್ಷೇತ್ರದಲ್ಲಿನ ಕಾರ್ಮಿಕರು, ಅಸಂಘಟಿತ ವರ್ಗದ ಜನರ ಸಮಸ್ಯೆಗಳ ಬಗ್ಗೆ ಗಮನಕ್ಕೆ ತರಲಾಗಿದ್ದು, ಪ್ರಸ್ತುತ ಸಂಕಷ್ಟದಲ್ಲಿರುವ ಕಾರ್ಮಿಕ ವರ್ಗಕ್ಕೆ ಇಲಾಖೆಯಿಂದ ಆಹಾರ ಸಾಮಾಗ್ರಿ ಕಿಟ್ ನೀಡಲು ಮಾಡಿಕೊಂಡ ಮನವಿಗೆ ಸಚಿವರು ಸ್ಪಂದಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

ಕರಡಿ ಸಂಗಣ್ಣ, ಸಂಸದರು ಕೊಪ್ಪಳ.


Spread the love

LEAVE A REPLY

Please enter your comment!
Please enter your name here