ಕೋವಿಡ್ ಜಾಗೃತಿ ಜನಾಂದೋಲನ ಜಾಥಾಕ್ಕೆ ನ್ಯಾ. ರೇಖಾ ಚಾಲನೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕೋವಿಡ್-19 ಹರಡುವಿಕೆ ತಡೆಗಟ್ಟುವುದಕ್ಕಾಗಿ ಜಾಗೃತಿ ಮೂಡಿಸಲು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅ. 17ರಂದು ಹಮ್ಮಿಕೊಳ್ಳಲಾದ ‘ಕೋವಿಡ್-19 ಪ್ರಚಾರಾಂದೋಲನ’ ‘ಸುರಕ್ಷಿತರಾಗಿರಿ ಮತ್ತು ಇತರರನ್ನು ಸುರಕ್ಷಿತವಾಗಿರಿಸಿ’ ಜನಾಂದೋಲನ ಜಾಥಾಕ್ಕೆ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಅಧ್ಯಕ್ಷೆ ಬಿ.ಎಸ್. ರೇಖಾ ಚಾಲನೆ ನೀಡಿದರು.
ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಹಾಗೂ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯಿತು.
ಆರೋಗ್ಯ ರಕ್ಷಣೆ ಮಾಡಿಕೊಳ್ಳಿ: ಜಾಥಾಕ್ಕೆ ಚಾಲನೆ ನೀಡಿ, ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ನ್ಯಾ.ಬಿ.ಎಸ್. ರೇಖಾ, ಕೋವಿಡ್-೧೯ ಹರಡುವಿಕೆ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ನ್ಯಾಯಾಲಯ, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಮುಖಗವಸು (ಮಾಸ್ಕ್) ಹಾಕಿಕೊಳ್ಳದಿದ್ದರೆ ತಿಳಿಹೇಳಿ, ಜಾಗೃತಿ ಮೂಡಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ‘ಕೋವಿಡ್-19 ಪ್ರಚಾರಾಂದೋಲನ’ ‘ಸುರಕ್ಷಿತರಾಗಿರಿ ಮತ್ತು ಇತರರನ್ನು ಸುರಕ್ಷಿತವಾಗಿರಿಸಿ’ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗವು ಶ್ರೀಮಂತ, ಬಡವ ಎಂಬ ಭೇದವಿಲ್ಲದೆ ಎಲ್ಲರನ್ನೂ ಕಾಡುತ್ತಿದೆ. ಔ?ಧ ಲಭ್ಯವಾಗುವ ತನಕ ಜಾಗ್ರತೆಯಿಂದ ಆರೋಗ್ಯ ರಕ್ಷಣೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡಿ, ರೋಗದ ವಿರುದ್ಧ ಹೋರಾಡಬೇಕು ಎಂದರು.
ತ್ವರಿತಗತಿ ವಿಶೇ? ನ್ಯಾಯಾಲಯ-೧ (ಪೋಕ್ಸೋ ನ್ಯಾಯಾಲಯ)ದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಸ್.ಎಂ. ಜಾಲವಾದಿ, ಹಿರಿಯ ಸಿವಿಲ್ ನ್ಯಾಯಾಧೀಶರು (ಸಿಜೆಎಂ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಕುಮಾರ ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ (ಜೆ.ಎಂ.ಎಫ್.ಸಿ. ನ್ಯಾಯಾಲಯ) ಮನು ಶರ್ಮಾ, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನ ಉದಯ ಕುಲಕರ್ಣಿ, ವಕೀಲರು ಮತ್ತು ವಿವಿಧ ಇಲಾಖೆಗಳ ಹಾಗೂ ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ವತಿಯಿಂದ ಮಾಸ್ಕ್ ವಿತರಿಸಲಾಯಿತು.
 


Spread the love

LEAVE A REPLY

Please enter your comment!
Please enter your name here