ಖಾಸಗಿ ಶಾಲೆಗಳ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ
ಕೊರೋನಾದಿಂದ ರಾಜ್ಯದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ಅವರ ಸಂಕಷ್ಟಗಳಿಗೆ ಸರಕಾರ ತಕ್ಷಣ ಸ್ಪಂದಿಸಿ ಪರಿಹಾರ ಘೋಷಣೆ ಮಾಡಬೇಕೆಂದು ಮುಖಂಡ ಸಿ.ವಿ.ಚಂದ್ರಶೇಖರ ಸರಕಾರಕ್ಕೆ ಒತ್ತಾಯಿಸಿದರು.
ಅವರು ಕೊಪ್ಪಳ ತಾಲೂಕು ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಸಿ.ವಿ.ಚಂದ್ರಶೇಖರವರ ಸಹಯೋಗದಲ್ಲಿ ಶಿಕ್ಷಕರಿಗೆ ಫುಡ್‌ಕಿಟ್ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ನ್ಯಾಯವಾದಿ ರಾಘವೇಂದ್ರ ಆರ್. ಪಾನಘಂಟಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ಸರಕಾರ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಪರಿಹಾರ ನೀಡಿದೆ. ಆದರೆ ಖಾಸಗಿ ಶಾಲೆಗಳ ಶಿಕ್ಷಕರಿಗೆ ಯಾವ ಪರಿಹಾರ ನೀಡದಿರುವುದು ಖೇದಕರ. ಕೂಡಲೇ ಶಾಸಕರು ಹಾಗೂ ಸಂಸದರು ಸರಕಾರಕ್ಕೆ ಒತ್ತಾಯ ಮಾಡಿ ಶಿಕ್ಷಕರಿಗೆ ಪರಿಹಾರ ಕೊಡಿಸುವಲ್ಲಿ ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ಶಾಹಿದ್ ತಹಸೀಲ್ದಾರ ವಹಿಸಿದ್ದರು. ಅತಿಥಿಗಳಾಗಿ ಜಿಲ್ಲಾ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಜಗನ್ನಾಥ ಅಲ್ಲಂಪಲ್ಲಿ ಹಾಗೂ ಕಾರ್ಯದರ್ಶಿ ಪ್ರಹ್ಲಾದ ಅಗಳಿ, ದಾನಪ್ಪ ಕವಲೂರ, ಮಹಮ್ಮದ್ ಅಲಿಮುದ್ದೀನ್, ಮಲ್ಲಿಕಾರ್ಜುನ ಚೌಕಿಮಠ, ಶಿವನಗೌಡ ಪಾಟೀಲ, ವೀರಣ್ಣ ಕಂಬಳಿ ಹಾಗೂ ಜಿಲ್ಲೆಯ ಮತ್ತು ತಾಲೂಕಿನ ಪದಾಧಿಕಾರಿಗಳು ಭಾಗವಹಿಸಿದ್ದರು.
ಎ.ಕೆ.ಮುಲ್ಲನವರ್ ಸ್ವಾಗತಿಸಿ ನಿರೂಪಣೆ ಮಾಡಿದರು. ಕಾರ್ಯದರ್ಶಿ ನಾಗರಾಜ ಗುಡಿ ವಂದನಾರ್ಪಣೆ ಮಾಡಿದರು.
 


Spread the love

LEAVE A REPLY

Please enter your comment!
Please enter your name here