ಗಂಗಾವತಿಯಲ್ಲಿ ಹೆಚ್‍ಐವಿ ಸೋಂಕು ತಡೆ ಜಾಗೃತಿ ಕಾಯಕ್ರಮ: ಲಿಂಗರಾಜು

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ

ಜಿಲ್ಲೆಯ ಗಂಗಾವತಿ ನಗರದಲ್ಲಿ ಡಿ.01 ರಂದು ಆರೋಗ್ಯ ಇಲಾಖೆ, ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನದ ಪ್ರಯುಕ್ತ ಹೆಚ್‍ಐವಿ ಸೋಂಕು ನಿಯಂತ್ರಣದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಎಚ್‍ಒ ಡಾ. ಲಿಂಗರಾಜು ಅವರು ಹೇಳಿದರು.

ಕೊಪ್ಪಳ ಮೀಡಿಯಾ ಕ್ಲಬ್‍ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಏಡ್ಸ್ ತಡೆಗಟ್ಟುವಿಕೆಗೆ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಲ್ಲದೇ, ಜನರಲ್ಲೂ ಜಾಗೃತಿ ಮೂಡಿಸುವ ಕಾರ್ಯವೂ ನಡೆದಿವೆ. ಜನರಲ್ಲಿ ಈ ಬಗ್ಗೆ ಜಾಗೃತಿ‌ ಮೂಡಿದ್ದು ಎಚ್ಐವಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಇಳಿಮುಖವಾಗಿದೆ ಎಂದರು.

ಡಾ. ಮಹೇಶ ಮಾತನಾಡಿ, ಜಿಲ್ಲೆಯಲ್ಲಿ 2002 ರಿಂದ 2020ರ ಅಕ್ಟೋಬರ್ ವರೆಗೂ 4,31,054 ಜನರ ರಕ್ತ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 15173 ಜನರಲ್ಲಿ ಹೆಚ್‍ಐವಿ ಸೋಂಕು ಇರುವುದು ಪತ್ತೆಯಾಗಿದೆ. ಇವರಲ್ಲಿ 850 ಗರ್ಭಿಣಿಯರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ವರ್ಷ ಏಪ್ರಿಲ್‍ನಿಂದ ಅಕ್ಟೋಬರ್ ವರೆಗೂ 14514 ಜನರ ರಕ್ತ ಪರೀಕ್ಷೆ ಮಾಡಲಾಗಿದ್ದು, ಇವರಲ್ಲಿ 131 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ ಎಂದರು.

ಸೋಂಕಿತರ ಪೈಕಿ 35-49 ವರ್ಷದೊಳಗಿನ ವ್ಯಕ್ತಿಗಳಲ್ಲಿಯೇ ಹೆಚ್ಚು ಸೋಂಕು ಪತ್ತೆಯಾಗುತ್ತಿರುವುದು ಪರೀಕ್ಷೆ ವೇಳೆ ಬೆಳಕಿದೆ ಬಂದಿದೆ ಎಂದರಲ್ಲದೇ, ಜಿಲ್ಲೆಯಲ್ಲಿ ಎಆರ್‍ಟಿ ಆರಂಭ ಪೂರ್ವ 12492 ಜನರು ನೊಂದಣಿ ಮಾಡಿಸಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ಎಆರ್‍ಟಿ ಆರಂಭವಾದ ಬಳಿಕ 10622 ಜನರು ನೊಂದಣಿಯಾಗಿದ್ದಾರೆ. ಇವರಲ್ಲಿ 5556 ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದು, 3627 ಜನರು ಸಾವನ್ನಪ್ಪಿದ್ದಾರೆ. ಉಳಿದವರು ಅನ್ಯ ಜಿಲ್ಲೆ ಹಾಗೂ ಅನ್ಯ ರಾಜ್ಯದವರೂ ಆಗಿದ್ದಾರೆ. ಟ್ರಕ್ ಸಂಚಾರಿಗಳೂ ಆಗಿದ್ದಾರೆ. ಅವರನ್ನು ಪರೀಕ್ಷೆ ಮಾಡಿದ ವೇಳೆ ಸೋಂಕು ಇರುವುದು ಪತ್ತೆಯಾಗಿದೆ. ಅಂತವರ ವಿಳಾಸ ಪತ್ತೆ ಮಾಡಿ ಅವರು ಇರುವ ಜಿಲ್ಲೆಗೆ ಚಿಕಿತ್ಸೆ ಪಡೆಯಲು ಕಳುಹಿಸಿಕೊಡಲಾಗಿದೆ ಎಂದರು.

ರಾಜ್ಯದಲ್ಲಿ ಹೆಚ್‍ಐವಿ ಸೋಂಕಿತರ ಪ್ರಮಾಣ 5ನೇ ಸ್ಥಾನದಲ್ಲಿದೆ. ಈ ಹಿಂದಿನ ಅಂಕಿ-ಅಂಶ ಹೋಲಿಕೆ ಮಾಡಿದರೆ ಸ್ವಲ್ಪ ಕಡಿಮೆಯಾಗುತ್ತಿದೆ. ಅಲ್ಲದೇ, ಕಳೆದ ವರ್ಷ ಕುಷ್ಟಗಿಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಮಾಡಲಾಗಿದೆ. ಅಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕಿತ್ತು. ಈ ವರ್ಷ ಗಂಗಾವತಿಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಿದೆ. ಹಾಗಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಗಂಗಾವತಿಯಲ್ಲಿಯೇ ನಡೆಯಲಿದೆ. ಮ್ಯಾರಥಾನ್ ಸೇರಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here