ಗದಗ ನಗರಸಭೆ ವ್ಯಾಪ್ತಿಯ ರಸ್ತೆ ದುರಸ್ತಿಗೆ ಕ್ರಮ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಸತತ ಮಳೆಯಿಂದಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿದ್ದು, ಮಳೆ ಪ್ರಮಾಣ ಕಡಿಮೆಯಾದ ತಕ್ಷಣವೇ ಸಂಬಂಧಿಸಿದ ಇಲಾಖೆಗಳು ರಸ್ತೆ ಸುಧಾರಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಜರುಗಿದ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿ ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಹಾಗೂ 24*7ಕುಡಿಯುವ ನೀರಿನ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿವಾರ ವಿವಿಧ ಯೋಜನೆಗಳ ಅನುಷ್ಠಾನಗೊಳಿಸುತ್ತಿರುವ ಅನುಷ್ಠಾನ ಸಂಸ್ಥೆಗಳ ಸಭೆಯನ್ನು ಕರೆದು ಈ ಕುರಿತು ನಿರ್ದೇಶನ ನೀಡುತ್ತಿದ್ದು, ನಗರಸಭೆ, ಲೋಕೋಪಯೋಗಿ ಇಲಾಖೆ, ರಾಜ್ಯ ಹೆದ್ದಾರಿ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳು ರಸ್ತೆ ಸುಧಾರಣೆಗೆ ಕ್ರಮವಹಿಸಲು ತಿಳಿಸಲಾಗಿದೆ. ಮಳೆ ಪ್ರಮಾಣ ಕಡಿಮೆ ಆದೊಡನೆ ರಸ್ತೆಗಳ ದುರಸ್ತಿ ಹಾಗೂ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಸೂಚಿಸಿದರು.

ನಗರಸಭೆ ವ್ಯಾಪ್ತಿ 14 ವಲಯಗಳಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಬಾಕಿ ಉಳಿದ ಕಾಮಗಾರಿಗಳನ್ನು 11 ವಲಯಗಳಲ್ಲಿ ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ, ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ ತಿಳಿಸಿದರು. ಈ ಕುರಿತು ಕೆ.ಯು.ಐ.ಡಿ.ಎಫ್.ಸಿ. ಸಂಬಂಧಿಸಿದ ತಾಂತ್ರಿಕ ಸಿಬ್ಬಂದಿ ಹಾಗೂ ಗುತ್ತಿಗೆದಾರರು ಜಂಟಿಯಾಗಿ ಸ್ಥಳ ಪರಿಶೀಲಿಸಿ ಟೆಂಡರ್‌ನಲ್ಲಿ ನಿಗದಿಪಡಿಸಿದಂತೆ ಕಾಮಗಾರಿಯ ಉಳಿಕೆ ಹಾಗೂ ಲೋಪಗಳನ್ನು ಪರಿಶೀಲಿಸಿ.
ಎಂ. ಸುಂದರೇಶ್ ಬಾಬು, ಜಿಲ್ಲಾಧಿಕಾರಿ, ಗದಗ

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿ ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಅಮೃತ ಯೋಜನೆ ಅಡಿ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿ ಹಾಗೂ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ24*7ಕುಡಿಯುವ ನೀರಿನ ಯೋಜನೆಯಡಿ ಚಾಲ್ತಿ ಇರುವ ಕಾಮಗಾರಿಗಳನ್ನು ಕಾಲಮಿತಿಯೊಳಗಡೆ ಪೂರ್ಣಗೊಳಿಸಲು ಪ್ರತಿ ವಾರ ನಿಗದಿಪಡಿಸಿದಂತೆ ಸಭೆಗಳನ್ನು ನಡೆಸಿ, ಗಡುವು ನೀಡಲಾಗಿದ್ದು, ಅನು?ನ ಸಂಸ್ಥೆಗಳು ಕಾಮಗಾರಿಯನ್ನು ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ನೀಡಲು ತಿಳಿಸಿದರು.
ಸಹಾಯವಾಣಿ ಆರಂಭಿಸಲು ನಿರ್ದೇಶನ: ನಗರಸಭೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ಒಳಚರಂಡಿ ಹಾಗೂ ಕುಡಿಯುವ ನೀರಿನ ಯೋಜನೆಯ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ, ಒಳಚರಂಡಿ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವಕಾಮಗಾರಿಗಳ ಸ್ಥಳಗಳಲ್ಲಿ ಹಲವಾರು ದೂರುಗಳು ಸ್ವೀಕೃತವಾಗುತ್ತಿವೆ. ಒಳಚರಂಡಿ ಯೋಜನೆಯ ಮೊದಲ ಹಂತದ ಕಾಮಗಾರಿಯಲ್ಲಿ ನಿಗದಿತ ಸಮಯದಲ್ಲಿ ಬಳಕೆಯಾಗದೆ ಈ ಹಂತದಲ್ಲಿ ಹೊಸ ಯೋಜನೆಗಳಿಗೆ ಹೊಂದಾಣಿಕೆ ಮಾಡಲು ಕೂಡಲೇ ಸ್ಥಳಗಳನ್ನು ಪರಿಶೀಲಿಸಿ, ತಮ್ಮ ಅಧೀನ ಸಿಬ್ಬಂದಿಗೆ ಸೂಕ್ತ ಯೋಜನೆ ರೂಪಿಸಲು ಹಾಗೂ ಸಾರ್ವಜನಿಕರಿಗೆ ಉಪಯೋಗಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಸೂಚಿಸಿದರು.
ಒಳಚರಂಡಿ ಕಾಮಗಾರಿಯ ಅನುಷ್ಠಾನದಲ್ಲಿ ಹಾಳಾದ ರಸ್ತೆಗಳನ್ನು ಪುನರ್ ನಿರ್ಮಿಸಲು ಒಂದು ತಿಂಗಳು ಗಡುವು ನೀಡಿ, ಎಲ್ಲಾ ಕಾಮಗಾರಿಗಳ ಪೂರ್ಣಗೊಳಿಸಲು ತಿಳಿಸಿದರು. ಝೋನ್ 2 ಮತ್ತು 3ರ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಲು, ಬಾಕಿ ಉಳಿದ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಸದರಿ ವಲಯಗಳಲ್ಲಿ ಒಳಚರಂಡಿ ಕಾಮಗಾರಿ ಸಾರ್ವಜನಿಕರಿಗೆ ಬಳಕೆ ಪ್ರಾರಂಭವಾದ ಕೂಡಲೇ ಸಹಾಯವಾಣಿ ಕೇಂದ್ರ ಸ್ಥಾಪಿಸುವಂತೆ ನಿರ್ದೇಶನ ನೀಡಿದರು.
ಕೆ.ಯು.ಐ.ಡಿ.ಎಫ್.ಸಿ. ಮುಖ್ಯ ಅಭಿಯಂತರ ಎಂ.ಬಿ. ಜಗತೇರಿ, ಕೆ.ಯು.ಡಬ್ಲ್ಯು.ಎಸ್. ಮುಖ್ಯ ಅಭಿಯಂತರ ಚಾಮರಾಜಗೌಡ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್., ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ ಜಾಧವ ಹಾಗೂ ಕೆ.ಯು.ಐ.ಡಿ.ಎಫ್.ಸಿ. ಮತ್ತು ಕೆ.ಯು.ಡಬ್ಲ್ಯು.ಎಸ್. ಅಭಿಯಂತರರು ಹಾಗೂ ಕಾಮಗಾರಿಗಳ ಗುತ್ತಿಗೆದಾರರು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here