25.7 C
Gadag
Wednesday, June 7, 2023

ಗದಗ-ಹುಬ್ಬಳ್ಳಿ ಮಧ್ಯೆ ಎಲೆಕ್ಟ್ರಿಕ್ ಬಸ್ ಪ್ರಾರಂಭ: ಸಾರಿಗೆ ಸಚಿವ ಸವದಿ ಭರವಸೆ

Spread the love

ವಿಜಯಸಾಕ್ಷಿ ಸುದ್ದಿ, ಗದಗ

ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗೆ ಕೇಂದ್ರ ಸರ್ಕಾರ 55 ಲಕ್ಷ ರೂ. ಸಬ್ಸಿಡಿ ಕೊಡುತ್ತಿದ್ದು, ಸಬ್ಸಿಡಿ ಹಣ ಬಳಸಿಕೊಂಡು ಸುಮಾರು 350 ಎಲೆಕ್ಟ್ರಿಕ್ ಬಸ್‌ಗಳನ್ನು ಹೊರಗುತ್ತಿಗೆಯಲ್ಲಿ ಖರೀದಿ ಮಾಡಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಸಂಚಾರ ಆರಂಭಿಸಲಾಗುವುದು. ಅದರಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ 50 ಬಸ್‌ಗಳನ್ನು ನೀಡಲಾಗುತ್ತಿದ್ದು, ಹುಬ್ಬಳ್ಳಿ-ಗದಗ ನಡುವೆಯೂ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ನಗರದ ನವೀಕೃತ ಬಸ್‌ ನಿಲ್ದಾಣ ಉದ್ಘಾಟಿಸಿದ ಬಳಿಕ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರೆಸಾರ್ಟ್ ರಾಜಕಾರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಿಕ್ಕಮಗಳೂರಿಗೆ ಇಲಾಖೆಯ ಪರಿಶೀಲನಾ ಸಭೆಗೆ ಹೋದಾಗ ಸಚಿವರು, ಶಾಸಕರು ಭೇಟಿಯಾಗುವುದು ಸ್ವಾಭಾವಿಕ. ನಾನು ಇಲ್ಲಿಗೆ ಬಂದ ಮೇಲೆ ನನ್ನನ್ನು ಅನೇಕರು ಭೇಟಿ ಮಾಡುತ್ತಾರೆ. ಅದಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಈಗಾಗಲೇ ಶೇ.95 ರಷ್ಟು ಸರಿ ಹೋಗಿದೆ. ಇನ್ನುಳಿದ ಶೇ.5 ರಷ್ಟನ್ನೂ ಸರಿಪಡಿಸಲಾಗುವುದು ಎಂದು ಹೇಳಿದರು.

ಸಹಜವಾಗಿ ಎಲ್ಲರಿಗೂ ದೊಡ್ಡದಾಗಿರುವ ಇಲಾಖೆ ಬೇಕು. ಆದರೆ, ಕೆಲಸ ಮಾಡಲು ಸಣ್ಣ ಹಾಗೂ ದೊಡ್ಡ ಇಲಾಖೆ ಅಂತಿಲ್ಲ. ಕೆಲಸ ಮಾಡುವವನಿಗೆ ಯಾವ ಇಲಾಖೆಯಾದರು ಅಷ್ಟೇ. ಭಾರ ಹೊರುವವನಿಗೆ ಹಿಂದೆ ಹೊತ್ತರು ಅಷ್ಟೇ, ಮುಂದೆ ಹೊತ್ತರು ಅಷ್ಟೇ ಎಂದು ವಲಸಿಗರ ಸಚಿವ ಸ್ಥಾನದ ಅಸಮಾಧಾನದ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಈಗಾಗಲೇ ಸಮಿತಿ ರಚಿಸಿದ್ದು, ಇನ್ನೊಂದು ತಿಂಗಳೊಳಗಾಗಿ ಬೇಡಿಕೆ ಈಡೇರಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts