27.3 C
Gadag
Wednesday, June 7, 2023

ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ!

Spread the love

ವಿಜಯಸಾಕ್ಷಿ ಸುದ್ದಿ, ಹಾಸನ: ಗುಂಡಿಕ್ಕಿ ಕೆಇಬಿ ನೌಕರನ ಹತ್ಯೆ ಮಾಡಿರುವ ದಾರುಣ ಘಟನೆ ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಬಳಿ ನಡೆದಿದೆ.

ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್ (36) ಕೊಲೆಯಾದ ವ್ಯಕ್ತಿಯಾಗಿದ್ದು, ಗ್ರಾಮದ‌ ಬಳಿಯ ಹೊಲದಲ್ಲಿ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಪಾರ್ಟಿ ಮುಗಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.

ಶವದ ಪಕ್ಕದಲ್ಲಿ ಬಿದ್ದಿರುವ ಮದ್ಯದ ಬಾಟಲ್ ಹಾಗೂ ಊಟದ ಪ್ಯಾಕೆಟ್ ಗಳಿಂದ ಪೊಲೀಸರು ಈ ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆಗ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts