ಗೋವಾ ಸಿಎಂ ಮಹದಾಯಿ ಕ್ಯಾತೆ: ಬೆಂಗಳೂರು ಚಲೋಗೆ ನಿರ್ಧರಿಸಿದ ರೈತರು

0
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ

ಗೋವಾ ಸಿಎಂ ಮಹದಾಯಿ ಕ್ಯಾತೆ ಬೆನ್ನಲ್ಲೇ, ರೈತರು ಹೋರಾಟದ ಎಚ್ಚರಿಕೆ ನೀಡಿದ್ದು, ಬೆಂಗಳೂರು ಚಲೋ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ.

ಜಿಲ್ಲೆಯ ನರಗುಂದ ಮಹದಾಯಿ ಹೋರಾಟ ವೇದಿಕೆಯಲ್ಲಿ
ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ಈ ಕುರಿತು ನಿರ್ಧಾರ ಕೈಗೊಂಡಿದ್ದಾರೆ.

ಮಹದಾಯಿ ನೀರಿಗಾಗಿ ಡ್ಯಾಂ ಕಾಮಗಾರಿ ಆರಂಭಿಸಬೇಕು.
ಮಹಾರಾಷ್ಟ್ರ ಗಡಿ ವಿಚಾರದಲ್ಲಿ ರಾಜ್ಯದಲ್ಲಿ ಅಶಾಂತಿ ಹುಟ್ಟಿಸುವ ಕೆಲಸ ಮಾಡುತ್ತಿದೆ. ಕೂಡಲೇ ಅದಕ್ಕೆ ಕಡಿವಾಣ ಹಾಕಬೇಕು.
ಅಲ್ಲದೇ, ನಂಜುಂಡಪ್ಪ ವರದಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ವೀರೇಶ ಸೊಬರದಮಠ ಒತ್ತಾಯಿಸಿದರು.

ಈ ತಿಂಗಳಲ್ಲಿ ಬೆಂಗಳೂರು ಚಲೋ ಸಮಯ ನಿಗದಿ ಮಾಡುತ್ತೇವೆ. ಅಲ್ಲದೇ, ನಮ್ಮ ಮೂರೂ ಬೇಡಿಕೆಗಳು ಈಡೇರುವವರಿಗೆ ಬೆಂಗಳೂರು ಬಿಟ್ಟು ಬರುವುದಿಲ್ಲವೆಂದು ಎಚ್ಚರಿಕೆ ನೀಡಿದ ಸೊಬರದಮಠ ಅವರು, ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here