ವಿಜಯಸಾಕ್ಷಿ ಸುದ್ದಿ, ಗದಗ
ಕಳೆದ ಹಲವು ದಿನಗಳಿಂದ ಹನಿ ನೀರಾವರಿಯ ಪೈಪ್ಗಳು ಕಳ್ಳತನವಾಗುತ್ತಿದ್ದವು. ಮಂಗಳವಾರ ರಾತ್ರಿ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತ್ಲಿ ಶಿರೂರು ಗ್ರಾಮದಲ್ಲಿ ಹನಿ ನೀರಾವರಿಯ ಲಕ್ಷಾಂತರ ರೂಪಾಯಿ ಮೌಲ್ಯದ ಪೈಪ್ಗಳನ್ನು ಕಳ್ಳತನ ಮಾಡಿದ ಖದೀಮರು, ಟ್ರ್ಯಾಕ್ಟರ್ನಲ್ಲಿ ತುಂಬುವಾಗ ಗ್ರಾಮಸ್ಥರ ಕಣ್ಣಿಗೆ ಬಿದ್ದಿದ್ದಾರೆ.
ಗ್ರಾಮಸ್ಥರು ಕಳ್ಳರನ್ನು ಬೆನ್ನಟ್ಟುತ್ತಿದ್ದಂತೆ ನೀರಿನ ಪೈಪ್ ಕಳ್ಳರು, ಪೈಪ್ಗಳನ್ನು ತುಂಬಿದ್ದ ಟ್ರ್ಯಾಕ್ಟರ್ನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ನಾಲ್ಕೈದು ಜನ ಇದ್ದರು ಎಂದು ಹೇಳಲಾಗುತ್ತಿದ್ದು, ನೀರಿನ ಪೈಪ್ ಕಳ್ಳರ ಹಾವಳಿಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಅವರನ್ನು ಹೇಗಾದರೂ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿಯಲು ರೈತರು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಆರೋಪಿಗಳ ಬಂಧನಕ್ಕೆ ರೈತರು ಒತ್ತಾಯಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.