ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಇಲ್ಲೊಬ್ಬ ಹಸೆಮಣೆ ಏರುವ ದಿನವೇ ಹಣೆಗೆ ಬಾಸಿಂಗ ಕಟ್ಟಿಕೊಂಡು ಬಂದು ಗ್ರಾಮ ಪಂಚಾಯತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ.
ಗದಗ ತಾಲ್ಲೂಕಿನ ಸೊರಟೂರು ಗ್ರಾ.ಪಂ.ಗ ಅದೇ ಗ್ರಾಮದ ೩ನೇ ವಾರ್ಡ್ ನ ಸಾಮಾನ್ಯ ಕ್ಷೇತ್ರದಿಂದ ಮದುಮಗ ಪರಶುರಾಮ ಮಲ್ಲಾರಿ ಉಮೇದುವಾರಿಕೆ ಸಲ್ಲಿಸಿದ್ದಾನೆ.

ಮದುವೆ ದಿನವೇ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ ಪರಶುರಾಮ ಹಣೆಗೆ ಬಾಸಿಂಗ ಕಟ್ಟಿಕೊಂಡು, ಮದುವೆ ದಿರಿಸಿನಲ್ಲೇ ಗ್ರಾಮಸ್ಥರೊಂದಿಗೆ ಬಂದು ನಾಮಪತ್ರ ಸಲ್ಲಿಸಿದ್ದಾನೆ. ನಾಮಪತ್ರ ಸಲ್ಲಿಸಿದ ನಂತರ ಮದುವೆ ಮಂಟಪಕ್ಕೆ ತೆರಳಿ ವಧುವಿಗೆ ಮಾಂಗಲ್ಯಧಾರಣೆ ಮಾಡಿದ್ದಾನೆ. ವೈವಾಹಿಕ ಜೀವನಕ್ಕೆ ಕಾಲಿಡುವುದರೊಂದಿಗೆ ರಾಜಕೀಯ ಭವಿಷ್ಯಕ್ಕೂ ಮುನ್ನುಡಿ ಬರೆದಿದ್ದಾರೆ.