25.8 C
Gadag
Saturday, June 10, 2023

ಗ್ರಾ.ಪಂ. ಚುನಾವಣೆ, ಯುವಕರ ಸ್ಪರ್ಧೆ ಅಗತ್ಯ: ಮುತ್ತು ರಾಯರೆಡ್ಡಿ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ:
ಗ್ರಾಮೀಣ ಪ್ರದೇಶದ ಅಭಿವೃದ್ಧಿ ಆಗಬೇಕಾದರೆ ಸದ್ಯದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಯುವಕರು ಹೆಚ್ಚು ಸ್ಪರ್ದೆ ಮಾಡುವ ಅಗತ್ಯವಿದೆ ಎಂದು ಯುವ ಮುಖಂಡ ಮುತ್ತು ರಾಯರೆಡ್ಡಿ ಆಶಯ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿಯ 3ನೇ ವಾರ್ಡ್‌ಗೆ ಸ್ಪರ್ದಿಸಿರುವ ಮುತ್ತು ರಾಯರೆಡ್ಡಿ, ಗ್ರಾಮಗಳ ಶಕ್ತಿ ಕೇಂದ್ರ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಈ ಬಾರಿ ಯುವಕರು ಹೆಚ್ಚಿನ ಸಂಖೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದರು.

ಯುವಕರಿಂದಲೇ ಗ್ರಾಮ. ಪಟ್ಟಣ. ತಾಲ್ಲೂಕು ಜಿಲ್ಲೆ ಸೇರಿದಂತೆ ರಾಜ್ಯ, ರಾಷ್ಟ್ರಗಳ ಅಭಿವೃದ್ಧಿ ಸಾಧ್ಯ. ಇದಕ್ಕಾಗಿ ಪ್ರಸಕ್ತ ಗ್ರಾಮ ಪಂಚಾಯಿತಿ ಚುಣಾವಣೆಯಲ್ಲಿ ಸ್ಪರ್ಧೆಗಿಳಿಯುತ್ತಿರುವ ಯುವ ಪಡೆಯನ್ನು ಬೆಂಬಲಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ಗ್ರಾಮದ ಅಭಿವೃದ್ಧಿಯಾಗದ ಹೊರತು ರಾಷ್ರದ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳಿಗೆ ನೈರ್ಮಲ್ಯ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಯುವಕರು ನಿಸ್ವಾರ್ಥ ಸೇವೆ ಮಾಡಲಿದ್ದಾರೆ ಎಂದ ಮುತ್ತು, ತಾತ ಮುತ್ತಾತರ ಕಾಲದಿಂದಲೂ ರಾಜಕೀಯ ಮಾಡುತ್ತಿರುವ ಹಳೆ ಮುಖಗಳ ಬದಲಿಗೆ ಅಭಿವೃದ್ಧಿಗಾಗಿ ನಾನಾ ಕನಸುಗಳನ್ನು ಹೊತ್ತು ಹಳ್ಳಿ ಅಖಾಡಕ್ಕೆ ಧುಮುಕುತ್ತಿರುವ ಯುವಕರ ದಂಡು ಈ ಬಾರಿಯ ಗ್ರಾಮ ಪಂಚಾಯತಿಯ ಚುನಾವಣೆಗಳಲ್ಲಿ ಗೆಲುವಿನ ನಗೆ ಬೀರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts