ಗ್ರಾ.ಪಂ. ಚುನಾವಣೆ: ಸರ್ಕಾರಿ ವಾಹನ, ಅತಿಥಿ ಗೃಹ ವಶಕ್ಕೆ ಸೂಚನೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,
ಗದಗ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು ಗದಗ ಜಿಲ್ಲೆಯಲ್ಲಿ ಡಿ. 22 ಮತ್ತು 27ರಂದು ಒಟ್ಟು ಎರಡು ಹಂತಗಳಲ್ಲಿ ಜರುಗಲಿದೆ. ಈ ಕುರಿತು ನ. 30ರಂದು ನೀತಿ ಸಂಹಿತೆ ಜಾರಿಗೆ ಬಂದಿದೆ. ಜಿ.ಪಂ., ತಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹಾಗೂ ಎಪಿಎಂಸಿ ಅಧ್ಯಕ್ಷರಿಗೆ ಒದಗಿಸಲಾದ ಸರ್ಕಾರಿ ವಾಹನಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯಲಾಗಿದೆ.

ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಅವುಗಳನ್ನು ಆಯಾ ತಾಲೂಕಿನ ತಹಸೀಲ್ದಾರರ ವಶಕ್ಕೆ ನೀಡತಕ್ಕದ್ದು. ಗದಗ ತಾಲೂಕಿನ ವಾಹನಗಳನ್ನು ತಹಸೀಲ್ದಾರರು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಒಪ್ಪಿಸಬೇಕು. ಜಿಲ್ಲೆಯ ಗ್ರಾಮೀಣ ಮಟ್ಟದಲ್ಲಿ ಬರುವ ಎಲ್ಲ ನಿರೀಕ್ಷಣಾ ಮಂದಿರಗಳು, ಪ್ರವಾಸಿ ಮಂದಿರಗಳು, ಮಂಡಳಿಗಳ/ ನಿಗಮಗಳ ಅತಿಥಿ ಗೃಹಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳ ಅಧೀನಕ್ಕೆ ಪಡೆದುಕೊಳ್ಳಲಾಗಿದೆ.

ತಹಸೀಲ್ದಾರರು ತಮ್ಮ ತಾಲೂಕಿನಲ್ಲಿರುವ ಅತಿಥಿಗೃಹ  ಕಟ್ಟಡಗಳನ್ನು ವಶಕ್ಕೆ ಪಡೆದುಕೊಂಡು ವರದಿ ಸಲ್ಲಿಸಬೇಕೆಂದು ಗದಗ ಜಿಲ್ಲಾಧಿಕಾರಿಗಳು ಮತ್ತು  ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 


Spread the love

LEAVE A REPLY

Please enter your comment!
Please enter your name here