34.4 C
Gadag
Tuesday, March 28, 2023

ಚಕ್ಕಡಿಗೆ ಬೈಕ್ ಡಿಕ್ಕಿ; ಸವಾರರಿಬ್ಬರ ಸಾವು

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಎತ್ತಿನ ಚಕ್ಕಡಿಯ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ವರವಿ ಕ್ರಾಸ್ ಬಳಿ ನಡೆದಿದೆ.

ಪರಶುರಾಮ ಉಪ್ಪಾರ್(25), ಆಸೀಮ್ ಸಾಬ್ ಸುಂಕದ್(26) ಮೃತ ದುರ್ದೈವಿಗಳಾಗಿದ್ದು, ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ.

ಮೃತರಲ್ಲಿ ಪರಶುರಾಮ್ ಉಪ್ಪಾರ್ ಸ್ಥಳದಲ್ಲೇ ಮೃತಪಟ್ಟರೆ, ಆಸೀಮ್ ಸಾಬ್ ಸುಂಕದ್ ಜಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಶಿರಹಟ್ಟಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,749FollowersFollow
0SubscribersSubscribe
- Advertisement -spot_img

Latest Posts

error: Content is protected !!