ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಟೈರ್ ಗೆ ಬೆಂಕಿ ಹಚ್ಚುವುದು, ಮರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವುದನ್ನು ನಾವು ಕೇಳಿದ್ದೀವಿ. ಆದರೆ ಇಲ್ಲಿ ಚಪ್ಪಲಿ ಶೂಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಘಟನೆ ನಡೆದಿದೆ.
Advertisement
ಹೌದು ಗದಗ ನಗರದ ಮುಳಗುಂದ ನಾಕಾ ಈ ಬಗೆಯ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಟೈರ್ ಗೆ ಬೆಂಕಿ ಹಚ್ಚಲು ಅವಕಾಶ ನೀಡದ ಪೊಲೀಸರ ಕ್ರಮಕ್ಕೆ ವಿರುದ್ಧವಾಗಿ ಕರವೇ ಕಾರ್ಯಕರ್ತರು ಈ ಬಗೆಯ ಪ್ರತಿಭಟನೆ ಮಾಡಿದ್ದಾರೆ.
ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು, ತಾವು ಹಾಕಿಕೊಂಡಿದ್ದ ಚಪ್ಪಲಿ ಹಾಗೂ ಶೂ ಗೆ ಬೆಂಕಿ ಹೆಚ್ಚಿ, ಸುಟ್ಟು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಮ್ಸಿ ಕಾಯ್ದೆ ತಿದ್ದುಪಡಿಯನ್ನು ಕೈ ಬಿಡಲು ಒತ್ತಾಯಿಸಿದರು.