ಚಿಕ್ಕನರಗುಂದ ಗ್ರಾ.ಪಂ.ನಲ್ಲಿ ಸಾಮಾಜಿಕ ಪರಿಶೋಧನಾ ಸಭೆ

0
Spread the love

ವಿಜಯಸಾಕ್ಷಿ ಸುದ್ದಿ, ನರಗುಂದ

ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತಿಯಲ್ಲಿ ಮಂಗಳವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2020-2021ನೇ ಸಾಲಿನ 2ನೇ ಹಂತದ ಮತ್ತು 14ನೇ ಹಣಕಾಸು ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷ ಮುತ್ತು ರಾಯರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡಲ್ ಅಧಿಕಾರಿ ಸ್ನೇಹಾ ಕೊಪ್ಪದ ಹಾಗೂ ಪಿಡಿಒ ಶೈನಜಾ ಮುಜಾವರ ಕಾರ್ಯಕ್ರಮ ನಡೆಸಿ ಕೊಟ್ಟರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಮಲ್ಲವ್ವ ಮರಿಯಣ್ಣವರ, ಸದಸ್ಯರಾದ ಬಾಪುಗೌಡ ಹಿರೇಗೌಡ್ರ, ಲಕ್ಷ್ಮಣ ಕಂಬಳಿ, ಶರಣಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಈರವ್ವ ಮುದಿಗೌಡ್ರ, ಶೋಭಾ ಕೋಣಣ್ಣವರ, ಶ್ರುತಿ ಬ್ಯಾಳಿ, ನಿರ್ಮಲಾ ತಳವಾರ, ಶಂಕ್ರವ್ವ ಚಲವಾದಿ, ಅಂಗನವಾಡಿ ಕಾರ್ಯಕರ್ತೆಯರಾದ ಮಂಜುಳಾ ತೋರಗಲ್, ಸವಿತಾ ರಾಯರೆಡ್ಡಿ, ಭಾರತಿ ಪಾಟೀಲ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here