ಚಿನ್ನಕ್ಕಾಗಿ ಉದ್ಯಮಿ ಮಗನ ಮರ್ಡರ್; ಒಂದೇ ದಿನದಲ್ಲಿ ಆರೋಪಿತರು ಅರೆಸ್ಟ್

0
Spread the love

ವಿಜಯಸಾಕ್ಷಿ ಸುದ್ದಿ, ಯಾದಗಿರಿ: ಚಿನ್ನಕ್ಕಾಗಿ ಉದ್ಯಮಿ ಮಗನನ್ನು ಹತ್ಯೆ ಮಾಡಿದ ಪಾಪಿಗಳು ಕೊನೆಗೂ ಅಂದರ್ ಆಗಿದ್ದಾರೆ. ಕೊಲೆ ನಡೆದ ಒಂದೇ ದಿನದಲ್ಲಿ ಆರೋಪಿಗಳನ್ನು ಜಿಲ್ಲೆಯ ಹುಣಸಗಿ ಪೊಲೀಸರು ಬಂಧಿಸಿದ್ದಾರೆ.

ಜನವರಿ 13 ರಂದು, ಜಿಲ್ಲೆಯ ಹುಣಸಗಿ ಪಟ್ಟಣದ ರಾಜಸ್ಥಾನ ಮೂಲದ ಚಿನ್ನದ ವ್ಯಾಪಾರಿ ಜಗದೀಶ್ ಎಂಬುವರ 22 ವರ್ಷದ ಪುತ್ರ ನರೇಂದ್ರನನ್ನು ಆತನ ರೂಮ್ ನಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ನರೇಂದ್ರನ ಜೊತೆಗಿದ್ದ ಕಿಶೋರ್ ಎಂಬಾತ ಈ ಕೊಲೆಯ ಸೂತ್ರಧಾರಿ.

ಮಹಾರಾಷ್ಟ್ರ ಮೂಲದ ಅಜಿತ್ ಎಂಬಾತನ ಸಹಾಯದಿಂದ ತನ್ನ ಯಜಮಾನನನ್ನೇ ಹತ್ಯೆ ಮಾಡಿದ್ದ ಕಿಶೋರ್, ರೂಮ್ ನಲ್ಲಿದ್ದ 1 ಕೆಜಿ 570 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಮತ್ತು ಒಂದು ಬೈಕ್ ಸೇರಿದಂತೆ ಒಟ್ಟು 1 ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ಪಾರಾರಿಯಾಗಿದ್ದ.

ನರೇಂದ್ರನನ್ನು ಕೊಲೆ ಮಾಡಿದ್ದ ದುಷ್ಕರ್ಮಿಗಳು ಕಿಶೋರ್ ನನ್ನು ಅಪರಿಸಿದ್ದಾರೆಂಬಂತೆ ಬಿಂಬಿಸಲಾಗಿತ್ತು. ಹಾಡ ಹಗಲೇ ನಡೆದಿದ್ದ ಈ ಕೊಲೆ ಇಡೀ ಯಾದಗಿರಿ ಜನರನ್ನು ತಲ್ಲಣಗೊಳ್ಳಿಸಿತ್ತು.

ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಯಾದಗಿರಿ ಪೊಲೀಸರು ಎಸ್ಪಿ ಋಷಿಕೇಶ್ ಸೋನಾವಣೆ ನೇತೃತ್ವದಲ್ಲಿ, ಸುರಪುರ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಸಿಪಿಐ ದೌಲತ್ ಕುರಿ ಮತ್ತು ಪಿಎಸ್ಐಗಳಾದ ಬಾಪುಗೌಡ, ಬಾಷಾಮಿಯಾ, ಮತ್ತು ಸಿಬ್ಬಂದಿ ಕೊಲೆ ನಡೆದ ಒಂದೇ ದಿನದಲ್ಲಿ ಆರೋಪಿಗಳನ್ನು ಪತ್ತೆ ಮಾಡಿ, ಬಂಧಿತರಿಂದ 1 ಕೆಜಿ 570 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಮತ್ತು ಒಂದು ಬೈಕ್ ಸೇರಿದಂತೆ ಒಟ್ಟು 1 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here