32.1 C
Gadag
Saturday, April 1, 2023

ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ, ಪರಿಸರ ಜಾಗೃತಿ ಪತ್ರ ಬಿಡುಗಡೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಹುಬ್ಬಳ್ಳಿ
ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ವೀರರಾಣಿ ಕಿತ್ತೂರ ಚೆನ್ನಮ್ಮ ಅವರ ೧೯೭ನೇ ವಿಜಯೋತ್ಸವದ ಶುಭ ಸಂದರ್ಭದಲ್ಲಿ ನಗರದ ರಾಣಿ ಚೆನ್ನಮ್ಮಾಜಿ ಪ್ರತಿಮೆಗೆ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು ಹಾಗೂ ಪರಿಸರ ಜಾಗೃತಿ ಕರಪತ್ರ ಬಿಡುಗಡೆಗೊಳಿಸಲಾಯಿತು.
ವಾಕರಸಾ ನಿಗಮದ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ರೈತ ಮುಖಂಡ ವಿಕಾಸ ಸೊಪ್ಪಿನ, ವೀರಣ್ಣ ಕಲ್ಲೂರ, ಪಾಲಿಕೆ ಮಾಜಿ ಸದಸ್ಯ ರಾಜಣ್ಣ ಕೊರವಿ, ಮಾತನಾಡಿದರು. ಸಾಹಿತಿ ಪ್ರೊ ಎಸ್.ವಿ. ಪಟ್ಟಣಶೆಟ್ಟಿ, ಅಧ್ಯಕ್ಷತೆ ವಹಿಸಿದ್ದರು. ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‍್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಗ್ರಂಥಪಾಲಕ ಸುರೇಶ ಡಿ. ಹೊರಕೇರಿ ಸ್ವಾಗತಿಸಿ, ನಿರೂಪಿಸಿದರು. ಗೀತಾ ಮುಳ್ಳೊಳ್ಳಿ ವಂದಿಸಿದರು.
ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಎಸ್.ಐ. ನೇಕಾರ, ಆನಂದ ಘಟಪನದಿ, ಮೃತ್ಯುಂಜಯ ಮಟ್ಟಿ, ಡಾ. ಬಸವಕುಮಾರ ತಲವಾಯಿ, ಸದಾಶಿವಚೌಶೆಟ್ಟಿ, ರತ್ನಾಚೌಶೆಟ್ಟಿ, ಸಿ.ಜಿ.ಧಾರವಾಡ ಶೆಟ್ಟರ ಮುಂತಾದವರು ಇದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,753FollowersFollow
0SubscribersSubscribe
- Advertisement -spot_img

Latest Posts

error: Content is protected !!