ವಿಜಯಸಾಕ್ಷಿ ಸುದ್ದಿ, ಗದಗ
ಸರಕಾರಿ ವೈದ್ಯರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವೈದ್ಯರ ಸ್ನೇಹಿತರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
![](http://vijayasakshi.com/wp-content/uploads/2021/03/img-20210304-wa00305202821464267881107.jpg)
ನಗರದ ಜಿಲ್ಲಾಸ್ಪತ್ರೆ ವೈದ್ಯ ಡಾ. ಪ್ರಕಾಶ ಹೊಸಮನಿ ಎಂಬುವವರ ಫೇಸ್ಬುಕ್ ಖಾತೆಯನ್ನು ಫೇಕ್ ಮಾಡಿ ಹಣ ದರೋಡೆಗೆ ಮುಂದಾಗಿದ್ದಾರೆ.
ಡಾ.ಪ್ರಕಾಶ ಅವರು ನಗರದಲ್ಲಿ ಪ್ರತಿಷ್ಠಿತ ನ್ಯೂರೋ ಸರ್ಜನ್ ಸ್ಪೆಶಲಿಸ್ಟ್ ಆಗಿದ್ದು, ನಕಲಿ ಫೇಸ್ಬುಕ್ ಖಾತೆ ಮೂಲಕ ಸ್ನೇಹಿತರಿಗೆ ತುರ್ತಾಗಿ 15,000 ಬೇಕಿತ್ತು ಅಂತಾ ಸೈಬರ್ ದರೋಡೆಕೋರರು ಪೇಸ್ಬುಕ್ ಸಂದೇಶ ಕಳುಹಿಸಿದ್ದಾರೆ.
![](http://vijayasakshi.com/wp-content/uploads/2021/03/img-20210304-wa00319195986320308488510.jpg)
ಈ ವಿಷಯ ಸ್ನೇಹಿತರಿಂದ ಡಾ.ಪ್ರಕಾಶ ಅವರ ಗಮನಕ್ಕೆ ಬಂದಿದ್ದು, ತಮ್ಮೆಲ್ಲಾ ಸ್ನೇಹಿತರಿಗೆ ಖಾತೆ ಫೇಕ್ ಆಗಿರೋ ವಿಚಾರ ತಿಳಿಸಿದ್ದಾರೆ. ಅಲ್ಲದೇ, ಯಾರೂ ಕೂಡಾ ಹಣ ನೀಡದಂತೆ ತಮ್ಮ ವಿವಿಧ ವಾಟ್ಸಪ್ ಗ್ರುಪ್ ಗಳಲ್ಲಿ ಮನವಿ ಮಾಡಿದ್ದಾರೆ.
ಅಲ್ಲದೇ, ವೈದ್ಯರ ಸಹೋದರ ಸಂಭಂಧಿಗೂ ಈ ರೀತಿ ಪ್ರಕಾಶ ಅವರ ನಕಲಿ ಖಾತೆಯಿಂದ ಹಣದ ಬೇಡಿಕೆ ಬಂದಾಗ ದರೋಡೆಕೋರರಿಂದ ಮೊದಲು ಕೇವಲ ೧ ರೂ ಹಾಕಿಸಿಕೊಂಡಿದ್ದಾರೆ. ಈ ವೇಳೆ ಹಣ ಸಂದಾಯವಾಗಿ ದರೋಡೆಕೋರರ ಯುಟಿಐ ಸಂಖ್ಯೆ ಟ್ರೇಸ್ ಮಾಡಿದಾಗ ದರೋಡೆಕೋರರ ಹೆಸರನ್ನು ಸಹ ತೋರಿಸಿದೆ. ಈ ರೀತಿ ಸೈಬರ್ ಕ್ರೈಂ ದರೋಡೆಕೋರರನ್ನು ಪತ್ತೆ ಹಚ್ಚಬಹುದು ಎಂಬುವುದು ಪ್ರಕಾಶ ಅವರ ಅಭಿಪ್ರಾಯವಾಗಿದೆ.
![](http://vijayasakshi.com/wp-content/uploads/2021/03/img-20210304-wa00288285136912365758109.jpg)
ಜಿಲ್ಲೆಯಲ್ಲಿಯೂ ಸೈಬರ್ ಕ್ರೈಂ ದಂಧೆ ಹಬ್ಬಿದ್ದು, ಈ ಹಿಂದೆ ಪೊಲೀಸರನ್ನೂ ಬಿಡದೇ ಫೇಕ್ ಅಕೌಂಟ್ ಬಳಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಇದೀಗ ವೈದ್ಯರಿಗೂ ನಕಲಿ ಜಾಲತಾಣದ ತಲೆನೋವು ಶುರುವಾಗಿದೆ.
ಈ ನಿಟ್ಟಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುವಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಡಾ.ಪ್ರಕಾಶ ಹೊಸಮನಿ ಒತ್ತಾಯಿಸಿದ್ದಾರೆ.