ಜಿಲ್ಲಾ ಉಸ್ತುವಾರಿಯಿಂದ ಆನಂದ ಸಿಂಗ್ ಕೈ ಬಿಡಿ: ಶಾಸಕ ಸೋಮಶೇಖರ ರೆಡ್ಡಿ ಆಗ್ರಹ

0
Spread the love

ವಿಜಯಸಾಕ್ಷಿ ಸುದ್ದಿ, ಬಳ್ಳಾರಿ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಯಿಂದ ಸಚಿವ ಆನಂದ್ ಸಿಂಗ್ ಅವರನ್ನು ಕೈ ಬಿಡಿ, ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವೆ’ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಆಗ್ರಹಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆ ವಿಭಜನೆಯಿಂದ ನೋವಾಗಿದೆ. ಸರ್ಕಾರ ಪಕ್ಷ ನಿಷ್ಠೆಯನ್ನು ಕಡೆಗಣಿಸಿ ಪಕ್ಷಾಂತರಿಗಳಿಗೆ ಮಣೆ ಹಾಕಿದೆ ಎಂದು ದೂರಿದರು.

ಆಂಧ್ರ ಗಡಿಯಿಂದ ಬಳ್ಳಾರಿ ಕೇವಲ 10 ಕಿಲೋಮೀಟರ್ ದೂರದಲ್ಲಿದೆ. ಬೆಳಗಾವಿ ಜಿಲ್ಲೆಯ ರೀತಿಯಲ್ಲಿ ಇನ್ನೊಂದು ಜಿಲ್ಲೆಯಲ್ಲಿ ಬೆಂಕಿ ಹಚ್ಚುವ ಪ್ರಯತ್ನದ ಭಾಗವಾಗಿ ವಿಭಜನೆ ನಡೆದಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಚಿವ ಆನಂದ ಸಿಂಗ್ ಕೇಳಿದ್ದನ್ನೆಲ್ಲ ಮುಖ್ಯಮಂತ್ರಿ ಕೊಡುತ್ತಿದ್ದಾರೆ. ಜಿಲ್ಲೆಯನ್ನು ಹೋಳು ಮಾಡಿದ ಉಸ್ತುವಾರಿ ಸಚಿವ ನಮಗೆ ಬೇಡವೇ ಬೇಡ ಎಂದು ಪ್ರತಿಪಾದಿಸಿದರು.

ವರದಿ.ಡಾ.ಅಬ್ದುಲ್ ರಜಾಕ್


Spread the love

LEAVE A REPLY

Please enter your comment!
Please enter your name here