22.7 C
Gadag
Sunday, December 10, 2023

ಜೀವಹಾನಿ ತಡೆಯುವ ಸಲುವಾಗಿ ನೈಟ್ ಕರ್ಪ್ಯೂ ಜಾರಿ; ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಸಾರ್ವಜನಿಕರಿಗೆ ತೊಂದರೆ ಆಗಬಾರದು ಹಾಗೂ ಜೀವ ಹಾನಿ ತಡೆಯುವ ಉದ್ದೇಶದಿಂದ ಮುಂಜಾಗೃತ ಕ್ರಮವಾಗಿ ನೈಟ್ ಕರ್ಪ್ಯೂ ಜಾರಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದರು.

ನಗರದಲ್ಲಿ ಮಾತನಾಡಿದ ಅವರು,
ವಿರೋಧ ಪಕ್ಷದವರು ಸಂಪೂರ್ಣ ಲಾಕ್ ಡೌನ್ ಮಾಡಿದರೆ, ಜನರಿಗೆ ತೊಂದರೆ ಮಾಡುತ್ತಾರೆ ಅಂತಾ ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲೂ ಲಾಕ್ ಡೌನ್ ಮಾಡಿದ್ದಾರೆ. ಅಲ್ಲಿ ಯಾವ ಸರ್ಕಾರ ಇದೆ ಎಂದು ಪ್ರಶ್ನಿಸಿದರು.

ಜನರು ಹೊಸ ವರ್ಷವನ್ನು ಅದ್ದೂರಿಯಾಗಿ ಆಚರಣೆ ಮಾಡುವ ಮೂಲಕ ಗುಂಪು ಸೇರುತ್ತಾರೆ. ಹಾಗಾಗಿ ಒಬ್ಬರಿಂದ ಒಬ್ಬರಿಗೆ ಎರಡನೇಯ ಅಲೆ ವಿಸ್ತರಣೆ ಆಗಬಾರದು
ಎಂಬ ಕಾರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಿದೆ ಎಂದರು.

ನೈಟ್ ಕರ್ಫ್ಯೂ ಕುರಿತು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ವಿಶ್ವನಾಥ ಅವರದ್ದು ವೈಯಕ್ತಿಕ ವಿಚಾರ. ವಿಶ್ವನಾಥ್ ಅವರ ನಿಲುವು ಪಕ್ಷದ ನಿಲುವಲ್ಲ.
ನಾವು ಮಾಡಿರುವುದು ನಮ್ಮ ಪಕ್ಷದ ನಿಲುವು ಮತ್ತು ಸರ್ಕಾರದ ನಿಲುವು ಎಂದು ಹೇಳುವ ಮೂಲಕ ನೈಟ್ ಕರ್ಫ್ಯೂ ಮಾಡಿರುವುದನ್ನು ಸಮರ್ಥಿಸಿಕೊಂಡರು.

ವಿದೇಶದಿಂದ ಬಂದವರನ್ನು ಕ್ವಾರಟೈನ್ ಮಾಡಲಾಗಿದೆ.
ಸಾರಿಗೆ ಸಂಸ್ಥೆ ಬಸ್ ಪ್ರಯಾಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಜನರು ಜವಾಬ್ದಾರಿತನದಿಂದ ವರ್ತನೆ ಮಾಡಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಕಿವಿ ಮಾತು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ,  ಬಿಜೆಪಿ ಜಿಲ್ಲಾ ಅಧ್ಯಕ್ಷ ಮೋಹನ್ ಮಾಳಶೆಟ್ಟಿ,  ಹಿರಿಯ ಮುಖಂಡ ಎಂ ಎಸ್ ಕರಿಗೌಡ್ರ, ಮಾಧವ ಗಣಾಚಾರಿ, ಶ್ರೀಪತಿ ಉಡುಪಿ, ರಾಜು ಕುರಡಗಿ, ಸಿದ್ದು ಪಲ್ಲೇದ, ರವಿ ದಂಡಿನ, ಬಾಬು ಯಲಿಗಾರ ಸೇರಿದಂತೆ ಇತರರು ಇದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts