ಜೂನ್ 7 ರವರೆಗೂ ಸಂಪೂರ್ಣ ಲಾಕ್ ಡೌನ್ ಮುಂದುವರಿಕೆ; ಸಚಿವ ಸಿ ಸಿ ಪಾಟೀಲ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.

ನಾಳೆ ಹಾಗೂ ನಾಡಿದ್ದು ಅಂದರೆ ಜೂನ್ 1 ಹಾಗೂ 2 ರಂದು‌ ದಿನಸಿ ಖರೀದಿ, ಮಾಂಸ ಖರೀದಿಗೆ ಅವಕಾಶ ನೀಡಲಾಗಿದೆ ಎಂದ ಸಚಿವರು, ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದ್ದು, ಅದರೊಳಗೆ ದಿನಸಿ ಖರೀದಿ ಮಾಡಬೇಕು ಎಂದರು. ಇನ್ನುಳಿದ ದಿನಗಳಲ್ಲಿ ಹೋಂಡಿಲೆವರಿಗೆ ಮಾತ್ರ ಅವಕಾಶ‌ ನೀಡಲಾಗಿದೆ.

ಜೂನ್ 7 ರವರೆಗೂ ಹಾಲು ಮೊಸರು ಖರೀದಿಗೆ ಪ್ರತಿದಿನ ಬೆಳಿಗ್ಗೆ 6 ರಿಂದ 8 ರವರೆಗೆ ಮಾತ್ರ ಅವಕಾಶ ಒದಗಿಸಲಾಗಿದೆ. ತರಕಾರಿ ಮಾರಾಟಕ್ಕೆ ತಳ್ಳುಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಿಗೆ ಕೋವಿಡ್ ನಿಯಮಾವಳಿ ಪಾಲಿಸಿ ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶವಿದೆ.

ಕೃಷಿ ಸಂಬಂಧಿತ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 12 ರವರೆಗೆ ಅವಕಾಶ ನೀಡಲಾಗಿದೆ.

ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಹೋಟೆಲ್ ಗಳು ಬಂದ್ ಇರಲಿವೆ.

ಜಿಲ್ಲೆಯ ಎಲ್ಲಾ ವೈನ್ ಶಾಪ್ ಬಾರ್ ರೆಸ್ಟೋರೆಂಟ್ ಗಳ ತೆರವಿಗೆ ಅನುಮತಿ ನೀಡಲಾಗಿಲ್ಲ ಎಂದರು.

ಈ ಮೊದಲೇ ಅನುಮತಿ ಪಡೆದ ಮದುವೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here