ಟಗರು ಕಳ್ಳತನ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

0
Spread the love

ವಿಜಯಸಾಕ್ಷಿ ಸುದ್ದಿ, ಮುಂಡರಗಿ

Advertisement

ಮನೆ ಮುಂದೆ ಕಟ್ಟಿದ್ದ ಟಗರು ಮರಿಯನ್ನು ಬಿಚ್ಚಿಕೊಂಡು ಹೋಗುತ್ತಿರುವುದನ್ನು ಕೇಳಿದ್ದಕ್ಕೆ, ಚಾಕುವಿನಿಂದ ಚುಚ್ಚುವುದಾಗಿ ಹೆದರಿಸಿ ಟಗರು ಮರಿ ಕದ್ದೊಯ್ಯಲು ಯತ್ನಿಸಿ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಘಟನೆ ಮುಂಡರಗಿ ತಾಲ್ಲೂಕಿನ ಹೊಸ ಡಂಬಳದಲ್ಲಿ ನಡೆದಿದೆ.

ಹುಬ್ಬಳ್ಳಿಯ ಸೆಟ್ಲ್ ಮೆಂಟ್ ನಿವಾಸಿಗಳಾದ ಶಿವಾಜಿ ರಾಮು ಮುಳಗುಂದ, ಶ್ರೀನಿವಾಸ್ ಮಲ್ಲಪ್ಪ ರಾಮಗಿರಿ, ಚಂದ್ರಶೇಖರ್ ದುರಗಪ್ಪ ಬಳ್ಳಾರಿ ಹಾಗೂ ನೂಲ್ವಿ ಗ್ರಾಮದ ವೀರೇಶ್ ಸಿದ್ದಪ್ಪ ಎಂಬುವವರೇ ಸದ್ಯ ಪೊಲೀಸರ ಅತಿಥಿಗಳಾಗಿದ್ದಾರೆ.

ಈ ನಾಲ್ವರು ಹೊಸ ಡಂಬಳದ ರಾಮಪ್ಪ ಮಲ್ಲಪ್ಪ ಹೊಸಳ್ಳಿಯವರ ಮನೆ ಮುಂದೆ ಕಟ್ಟಿದ್ದ ಟಗರು ಬಿಚ್ಚಿಕೊಂಡು ಹೋಗುತ್ತಿದ್ದರು. ಈ ವೇಳೆ ರಾಮಪ್ಪ ಬಿಚ್ಚಿಕೊಂಡು ಹೋಗದಂತೆ ತಡೆಯೊಡ್ಡಿದ್ದು, ಆರೋಪಿಗಳು ಬಿಡದಿದ್ದರೆ ಚಾಕುವಿನಿಂದ ಚುಚ್ಚಿ ಟಗರು ಮರಿ ಕೊಂಡೊಯ್ಯುವುದಾಗಿ ಹೆದರಿಸಿ ಕಾರಿನಲ್ಲಿ ಹೊತ್ತೊಯ್ಯುತ್ತಿರುವಾಗ ಅಲ್ಲೇ ಇದ್ದ ಸ್ಥಳೀಯರು ಆರೋಪಿಗಳನ್ನು ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ.

ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here