ಟೈರ್ ಗೆ ಬೆಂಕಿ ಹಚ್ಚಲು ಕರವೇ ಕಾರ್ಯಕರ್ತರ ಯತ್ನ; ಪೊಲೀಸರ ಜೊತೆ ವಾಗ್ವಾದ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಕರ್ನಾಟಕ ಬಂದ್ ಹಿನ್ನೆಲೆ ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದ ಘಟನೆ ನಡೆದಿದೆ.

ಪ್ರತಿಭಟನಾನಿರತ ಕರವೇ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಲು ಮುಂದಾದರು. ಈ ವೇಳೆ ಪೊಲೀಸರು ಅವಕಾಶ ನೀಡದ್ದಕ್ಕೆ, ಪೊಲೀಸರು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ನಗರದ ಮುಳಗುಂದ ನಾಕಾದಲ್ಲಿ ಈ ಘಟನೆ ನಡೆದಿದ್ದು, ಟೈರ್ ಗೆ ಬೆಂಕಿ ಹಚ್ಚಿದ್ರೆ ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದರು. ಪೊಲೀಸರ ಈ ನಡೆಗೆ ಕುಪಿತಗೊಂದ ಕರವೇ ಕಾರ್ಯಕರ್ತರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು.

ನಿಮ್ಮ ಕೆಲಸ ನೀವು ಮಾಡಿ ನಮ್ಮ ಕೆಲಸ ನಾವು ಮಾಡ್ತೀವಿ ಎಂದ ಕಾರ್ಯಕರ್ತರು, ಸರ್ಕಾರದ ಕೈಗೊಂಬೆ ಆಗಿ ಕೆಲಸ ಬೇಡ ಅಂತ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here