32.1 C
Gadag
Saturday, April 1, 2023

ಡಿಕೆಶಿಗೆ ಇನ್ನೂ ಬುದ್ಧಿ ಬಂದಿಲ್ಲ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಕೊಪ್ಪಳ:
ಡಿಕೆಶಿಯನ್ನು ಬಗ್ಗಸ್ತಿರೋದು ಬಿಜೆಪಿಯಲ್ಲ, ಸಿಬಿಐ. ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ದಾಳಿ ನಡೆಸುತ್ತಿರುವುದು ಬಿಜೆಪಿಯಲ್ಲ, ಸಿಬಿಐ. ಇಷ್ಟಾದರೂ ಡಿಕೆಶಿಗೆ ಬುದ್ಧಿ ಬಂದಿಲ್ಲ ಎಂದು ಆರ್‌ಡಿಪಿಆರ್ ಮಂತ್ರಿ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.
ಕೊಪ್ಪಳದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಯವರು ಈ ಹಿಂದೆ ಹವಾಲಾ ದಂಧೆಯಲ್ಲಿ ತೊಡಗಿ ಸಿಕ್ಕಿಬಿದ್ದಿದ್ದರು. ಆದರೂ ಅವರಿಗೆ ಬುದ್ಧಿ ಬಂದಿಲ್ಲ. ಅಕ್ರಮ ಮುಂದುವರಿಸಿದ್ದಕ್ಕೆ ಸಿಬಿಐ ದಾಳಿಯಾಗಿದೆ ಎಂದು ಅವರು ಹೇಳಿದರು.
ನಾಲ್ಕು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಗೆಲ್ಲಲಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆದರೂ ಬಿಜೆಪಿ ಗೆಲುವು ನಿಶ್ಚಿತ. ಎಂಎಲ್‌ಎ, ಎಂಪಿ ಉಪಚುನಾವಣೆಯಲ್ಲಿ ಗೆದ್ದಿದ್ದೇ ಇದಕ್ಕೆ ಸಾಕ್ಷಿ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಮತ್ತಿತರರು ಇದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,753FollowersFollow
0SubscribersSubscribe
- Advertisement -spot_img

Latest Posts

error: Content is protected !!