25.8 C
Gadag
Saturday, June 10, 2023

ಡಿವೈಎಸ್‌ಪಿ ವಿದ್ಯಾನಂದ ನಾಯಕಗೆ ಮುಖ್ಯಮಂತ್ರಿಗಳ ಪದಕ

Spread the love

ವಿಜಯಸಾಕ್ಷಿ ಸುದ್ದಿ, ಗದಗ

ಸಶಸ್ತ್ರ ಮೀಸಲು ಪಡೆ (ಡಿಎಆರ್) ಡಿವೈಎಸ್‌ಪಿ ವಿದ್ಯಾನಂದ ನಾಯಕ ಅವರು 2019ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸಾಧನೆಗೈದಿರುವ ಬಗ್ಗೆ ಇಲಾಖೆಯ ಗುಪ್ತ ವರದಿ (ಎಸಿಆರ್) ಆಧರಿಸಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪಿಡಬ್ಲ್ಯೂಡಿ ಇಂಜನೀಯರ್ ಆಗಿದ್ದ ವೆಂಕಟಪತಿ ನಾಯಕ ಹಾಗೂ ನಿವೃತ್ತ ಶಿಕ್ಷಕಿ ಸಾವಿತ್ರಿ ನಾಯಕ ದಂಪತಿ ಪುತ್ರರಾಗಿರುವ ಗೋಕರ್ಣ ಮೂಲದ ಡಿವೈಎಸ್‌ಪಿ ವಿದ್ಯಾನಂದ ನಾಯಕ ಅವರು, 14 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.

2006ರಲ್ಲಿ ಕಲಬುರಗಿ ಜಿಲ್ಲೆಯ ಮೂಲಕ ಪೊಲೀಸ್ ಸೇವೆಗೆ ಸೇರ್ಪಡೆಗೊಂಡಿರುವ ಅವರು, ನಂತರ ಹಾವೇರಿ, ಉಡುಪಿ, ಬೆಂಗಳೂರು, ಕಾರವಾರ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದು, ಸದ್ಯ ಗದಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

2010ರಲ್ಲಿ ಕಾರವಾರದಲ್ಲಿ ಸಂಭವಿಸಿದ ಕಡವಾಡ ಗುಡ್ಡ ದುರಂತ ಹಾಗೂ ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಉಂಟಾದ ನೆರೆ ಹಾವಳಿಯ ಸಂದರ್ಭದಲ್ಲಿ ಒಂದು ವಾರಗಳ ಕಾಲ ಸ್ಥಳದಲ್ಲಿಯೇ ಬೀಡು ಬಿಟ್ಟು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಮುಖ್ಯಮಂತ್ರಿಗಳ ಪದಕ ಪ್ರಶಸ್ತಿಗೆ ಆಯ್ಕೆಯಾಗಿರುವ ಡಿವೈಎಸ್‌ಪಿ ವಿದ್ಯಾನಂದ ನಾಯಕ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Posts