20.9 C
Gadag
Monday, October 2, 2023

ಡೂಪ್ಲಿಕೇಟ್ ಕೀಟನಾಶಕ ಮಾರಾಟ: ವೀರಭದ್ರೇಶ್ವರ ಅಗ್ರೋದ ಪರವಾನಿಗೆ ಸಸ್ಪೆಂಡ್

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಇಂದು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ) ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ವೇಳೆ ಕೀಟನಾಶಕ ಪರವಾನಿಗೆಯಲ್ಲಿ ಅನುಮತಿಸದೇ ಇರುವ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ, ನೋಂದಾಯಿತವಲ್ಲದ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ ಹಾಗೂ ಕೀಟನಾಶಕಗಳ ದಾಸ್ತಾನು ಷರತ್ತುಗಳನ್ನು ಉಲ್ಲಂಘಿಸಿರುವುದು ದೃಢಪಟ್ಟಿದೆ.

ಹೀಗಾಗಿ ಕೀಟನಾಟಕ ಕಾಯ್ದೆ 1968 ಹಾಗೂ ಕೀಟನಾಶಕ ನಿಯಮಗಳು 1971 ರನ್ವಯ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕಣವಿ ಇವರ ಪರವಾನಿಗೆಯನ್ನು ಅಮಾನತ್ತಿನಲ್ಲಿಟ್ಟು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!