26.1 C
Gadag
Wednesday, October 4, 2023

ತಮ್ಮನಿಂದಲೇ ಅಣ್ಣನ ಕೊಲೆ: ಪ್ರಕರಣ ಬೇಧಿಸಿದ ಪೊಲೀಸರು

Spread the love

ವಿಜಯಸಾಕ್ಷಿ ಸುದ್ದಿ, ಕೋಲಾರ: ತಮ್ಮನಿಂದಲೇ ಅಣ್ಣನ ಕೊಲೆಯಾಗಿದ್ದ ಪ್ರಕಣವನ್ನು ಪೊಲೀಸರು ಈಗ ಬೇಧಿಸುವ ಮೂಲಕ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ.

ಜ.22 ರಂದು ಜಿಲ್ಲೆಯ ಬಂಗಾರಪೇಟೆಯಲ್ಲಿ ಅಣ್ಣ ರಮೇಶ್ ನನ್ನು ಕೊಲೆ ಮಾಡಿದ ತಮ್ಮ ರಾಜೇಶ್ ಅಣ್ಣನ ಮೃತದೇಹವನ್ನು ಆಟೋದಲ್ಲಿ ಒಯ್ದು ಆಟೋ ಸಮೇತ ಸುಟ್ಟು ಹಾಕಿದ್ದ.

ಆರೋಪಿ ರಾಜೇಶನಿಗೆ ಮಕ್ಕಳಿಲ್ಲದ ಕಾರಣ ರಮೇಶನ ಮಕ್ಕಳನ್ನು ದತ್ತು ನೀಡುವಂತೆ ಒತ್ತಾಯ ಮಾಡ್ತಿದ್ದ. ಇದಕ್ಕೆ ರಮೇಶ್ ನಿರಾಕರಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ತಲೆಗೆ ಮಚ್ಚಿನಿಂದ ರಾಜೇಶ್ ಹಲ್ಲೆ ನಡೆಸಿ ರಮೇಶನನ್ನು ಕೊಂದಿದ್ದ.

ನಂತರ ಸ್ನೇಹಿತ ಅಜಯ್ ಸಹಾಯದಿಂದ ಆಟೋದಲ್ಲಿ ಹೋಗಿ ಸುಟ್ಟು ಹಾಕಿದ್ದ ಆರೋಪಿಗಳು. ಆಟೋ ನಂಬರ್ ನಿಂದ ಪೊಲೀಸರು ತನಿಖೆ ಆರಂಭಿಸಿದಾಗ ಮಾಹಿತಿ ಬಯಲಾಗಿದೆ.

ಬಂಗಾರಪೇಟೆ ಹೊರಹೊರವಲಯದ ಇಂದಿರಾನಗರ – ಮಲ್ಲಂಗುರ್ಕಿ ಅಂಡರ್ ಪಾಸ್ ಬಳಿ ಆಟೋ ಸಮೇತ ಆರೋಪಿತರು ಬೆಂಕಿ ಹಾಕಿದ್ದರು. ಸದ್ಯ ಆರೋಪಿಗಳಿಬ್ಬರು ಬಂಗಾರಪೇಟೆ ಪೊಲೀಸರ ವಶದಲ್ಲಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts

error: Content is protected !!