ತಿಮ್ಮಾಪೂರ ಗ್ರಾಮಕ್ಕೆ ಭೇಟಿ ನೀಡಿದ ತಹಸೀಲ್ದಾರ್

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರೈತರು ಹಗೆವುಗಳಲ್ಲಿ ಸಂಗ್ರಹಿಸಿದ್ದ ಧವಸ ಧಾನ್ಯಗಳಾದ ಜೋಳ ಕಡ್ಲಿ ಗೋಧಿ ನೀರು ಪಾಲಾಗಿರುವುದನ್ನು ಪರಿಶೀಲನೆ ನಡೆಸಿದರು.
ನಂತರ ಮನೆ ಮೇಲೆ ಛಾವಣಿ ಕುಸಿದುಬಿದ್ದ ಗಾಯಗೊಂಡ ಯುವಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಿಥಿಲಾವಸ್ಥೆಯಲ್ಲಿರುವ ಮನೆಗಳಿಗೆ ಭೇಟಿ ನೀಡಿ ಅವರಿಗೆ ತಾತ್ಕಾಲಿಕವಾಗಿ ಸರ್ಕಾರಿ ಶಾಲೆಗಳಲ್ಲಿ ಇರುವಂತೆ ಹೇಳಿದರು. ಇದೇ ವೇಳೆ ರೈತರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ತಿಮ್ಮಾಪೂರ ಗ್ರಾಮದಲ್ಲಿ ೨೫೦ ಹಗೆವುಗಳಲ್ಲಿ ಸಂಪೂರ್ಣ ಹಾಳಾಗಿದ್ದು ಪ್ರಾಥಮಿಕ ವರದಿ ಬಂದಿದೆ.
ನಷ್ಟ ಪರಿಹಾರ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ. ರೈತರಿಗೆ ಬಿತ್ತನೆ ಬೀಜ ರಸಗೊಬ್ಬರಗಳ ಕುರಿತು ಕೃಷಿ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಮನವಿ ನೀಡಿ ಮಾತನಾಡಿದ ರೈತ ಯುವ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ, ಪ್ರಸ್ತುತ ವರ್ಷ ತಿಮ್ಮಾಪುರ ಗ್ರಾಮಕ್ಕೆ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಭಾರಿ ಮಳೆಯಾಗಿ ರೈತರು ಸಂಗ್ರಹಿಸಿದ್ದ ದವಸ ದಾನ್ಯಗಳಾದ ಜೋಳ ಕಡ್ಲಿ ಗೋಧಿ ನೀರು ಪಾಲಾಗಿವೆ. ಬಿತ್ತನೆ ಮಾಡಲು ಸಹ ರೈತರ ಹತ್ತಿರ ಬೀಜಗಳಿಲ್ಲ ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜಗಳನ್ನು ಕೂಡಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶರಣಪ್ಪ ಜೋಗಿನ, ಯಲ್ಲಪ್ಪ ಲಕ್ಕುಂಡಿ, ಶೇಖಪ್ಪ ಘಂಟೆ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here