22.7 C
Gadag
Sunday, December 10, 2023

ತಿಲಕನಗರ ಬಡಾವಣೆ; ನೀರಿನ ಪೈಪುಗಳ ದುರಸ್ತಿಗೆ ವೆಲ್ಫೇರ್ ಪಾರ್ಟಿ ಆಗ್ರಹ

Spread the love

ವಿಜಯಸಾಕ್ಷಿ ಸುದ್ದಿ, ಕಲಬುರಗಿ

ನಗರದ ಕುಸನೂರು ರಸ್ತೆಯಲ್ಲಿರುವ ತಿಲಕನಗರ ಬಡಾವಣೆಯಲ್ಲಿ ನಳದ ಪೈಪುಗಳು ಒಡೆದು ಹೋಗಿದ್ದು , ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಕರ್ನಾಟಕ ವೆಲ್ಫೇರ್ ಪಾರ್ಟಿ ಕಲಬುರ್ಗಿ ದಕ್ಷಿಣ ದಕ್ಷಿಣ ವಲಯ ಅಧ್ಯಕ್ಷ ಪ್ರಕಾಶ್ ಪಾಟೀಲ್ ಆಗ್ರಹಿಸಿದ್ದಾರೆ.

ಕಲಬುರ್ಗಿ ಒಳಚರಂಡಿ ಮಂಡಳಿ ಅಧಿಕಾರಿಗೆ ಮನವಿ ಸಲ್ಲಿಸಿದ ಅವರು, ಬಡಾವಣೆಯಲ್ಲಿ ಒಳಚರಂಡಿ ಕಾಮಗಾರಿ ಮಾಡುವಾಗ ಕೆಲವು ಕಡೆಗಳಲ್ಲಿ ನಳದ ಪೈಪುಗಳು ಒಡೆದು ಹೋಗಿವೆ.

ಬೇಸಿಗೆಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಡಾವಣೆಯ ಜನರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಕೂಡಲೇ ಒಳಚರಂಡಿ ಮಂಡಳಿ ದುರಸ್ತಿಗೆ ಮುಂದಾಗುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಸಲೀಂ ಅಹ್ಮದ್ ಚಿತಾಪುರ, ಜಿಲ್ಲಾ ಉಪಾಧ್ಯಕ್ಷರು ಸಿದ್ದಣ್ಣ ಚಕ್ರ ಜಿ, ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಅಫ್ಜಲ್ ಖಾನ್ ಇನ್ನಿತರರು ಉಪಸ್ಥಿತರಿದ್ದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts