25.7 C
Gadag
Wednesday, June 7, 2023

ದಕ್ಷಿಣ ಭಾರತದಲ್ಲಿ ಯಡಿಯೂರಪ್ಪಗೆ ಗೋಲ್ಡನ್ ಟೈಮ್ ಸಿಕ್ಕಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಅಭಿಮತ

Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ಬಿಜೆಪಿ ಸರ್ಕಾರಕ್ಕೆ ಹಾಗೂ ನಾಯಕರಿಗೆ ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣ ಬೇಕಿಲ್ಲ. ಅಲ್ಲದೇ, ಅಭಿವೃದ್ಧಿಗೊಳಿಸಬೇಕೆಂಬ ಇಚ್ಛಾಶಕ್ತಿಯೂ ಇಲ್ಲವೆಂದು
ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಬಿಜೆಪಿ ವಿರುದ್ಧ
ಕಿಡಿಕಾರಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪರಿಶಿಷ್ಟ ಜಾತಿ, ಪಂಗಡಕ್ಕೆ ವಿಶೇಷ ಘಟಕ ಯೋಜನೆ ಜಾರಿಗೆ ತಂದಿದ್ದರು. ಪ್ರತಿವರ್ಷ ಅವರಿಗೆ ಆಯವ್ಯಯದಲ್ಲಿ ಹಣವಿಡುತ್ತಿದ್ದ ಅವರು, ಮೀಸಲಿಟ್ಟ ಹಣವನ್ನು ಸಂಪೂರ್ಣವಾಗಿ ಖರ್ಚು ಮಾಡಿದರು ಎಂದರು.

ಆದರೆ, ಈ ಸರ್ಕಾರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸರಿಯಾದ ರೀತಿಯಲ್ಲಿ ಹಣ ಖರ್ಚು ಮಾಡುತ್ತಿಲ್ಲ. ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಈ ವಿಷಯ ಅಸೆಂಬ್ಲಿಯಲ್ಲಿಯೂ ಚರ್ಚೆ ಆಗಿದೆ. ಈ ಇಲಾಖೆಯ ಹಣವನ್ನು ಪರಿಶಿಷ್ಟರಿಗೆ ಬಳಸಬೇಕು. ಇಲ್ಲವಾದಲ್ಲಿ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರದ ಮಂತ್ರಿ ಮಂಡಲದಲ್ಲಿ ಹೊಂದಾಣಿಕೆ ಇಲ್ಲ. ಅಲ್ಲದೇ, ಇಂತಹ ಕೆಲಸಕ್ಕೆ ಬಾರದ ಸರ್ಕಾರವನ್ನು ನಾನು ನೋಡಿಲ್ಲ. ಅವರ ಸಚಿವರು, ಶಾಸಕರೇ ಮಾತನಾಡುತ್ತಿರುವುದನ್ನು ನೋಡಿದ್ದೇವೆ. ದಕ್ಷಿಣ ಭಾರತದಲ್ಲಿ ಯಡಿಯೂರಪ್ಪಗೆ ಗೋಲ್ಡನ್‌ ಸಮಯ ಸಿಕ್ಕಿತ್ತು. ಆದರೆ, ಅವರು ಅದನ್ನ ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ನನಗೆ ಜೀವನ ಕೊಟ್ಟ ಪಕ್ಷ. ‌ನಮಗೆ ಯಾವುದೆ ಆಸೆ ಇಲ್ಲ.
ಪಕ್ಷದಿಂದ‌ ಯಾವುದನ್ನೂ ನಿರೀಕ್ಷಿಸಿಲ್ಲ. ನಾನು ಸೋತಾಗಲೂ ಪಕ್ಷ ನನ್ನ‌ ಬಿಟ್ಟಿಲ್ಲ. ನಾನು ಸೋತೆ ಅಂತಾ ಕೆಲಸ‌ ಮಾಡುವುದನ್ನೂ ನಿಲ್ಲಿಸಿಲ್ಲ. ನಾನು ಸದಾ ಜನರ ಜೊತೆ ಇದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸ್ಪಷ್ಟಪಡಿಸಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,803FollowersFollow
0SubscribersSubscribe
- Advertisement -spot_img

Latest Posts