ದಿ.ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಮತ್ತಿಕಟ್ಟಿ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಬೆಳಗಾವಿ: ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಮಾಜಿ ಸಭಾಪತಿ, ಹಿರಿಯ ಕಾಂಗ್ರೆಸ್ ನಾಯಕ ವೀರಣ್ಣ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯ ನಿವಾಸದಲ್ಲಿ ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ, ಸ್ಫೂರ್ತಿ ಅವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಒಳಪಂಗಡಗಳ ರಾಜ್ಯಾಧ್ಯಕ್ಷ ಡಾ. ಶರಣಪ್ಪ ಕೊಟಗಿ, ಹಿರಿಯ ನ್ಯಾಯವಾದಿ ರಾಜು ಬಾಗೇವಾಡಿ, ಅನಿಲ ಗುರುವ, ಸಂಭ್ರಮ ವಿಭೂತಿ ಸೇರಿದಂತೆ ಮುಂತಾದವರು ಇದ್ದರು.


Spread the love

LEAVE A REPLY

Please enter your comment!
Please enter your name here