ದೇವಾಲಯದ ಜಾಗ ಒತ್ತುವರಿ ಪ್ರಶ್ನಿಸಿದ ಅರ್ಚಕನನ್ನೇ ಸುಟ್ಟುಹಾಕಿದ ದುಷ್ಕರ್ಮಿಗಳು

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಜೈಪುರ: ಭೂಮಿ ವಿವಾದ ಸಂಬಂಧ ದೇವಾಲಯದ ಅರ್ಚಕನನ್ನು ಜೀವಂತವಾಗಿ ಸುಟ್ಟಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಸುಟ್ಟ ಗಾಯಗಳಿಂಡ ಬಳಲುತ್ತಿದ್ದ ಅರ್ಚಕ ಕಳೆದ ರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಕರೌಲಿ ಜಿಲ್ಲೆಯ ಸಪೋತ್ರಾದಲ್ಲಿ ನಡೆದ ಘಟನೆಯಲ್ಲಿ ದೇವಾಲಯದ ಅರ್ಚಕ ಬಾಬುಲಾಲ್ (50) ಸಾವಿಗೀಡಾಗಿದ್ದಾರೆ. ಇವರ ಮೇಲೆ ಒಂದೇ ಕುಟುಂಬದ ಆರು ಮಂದಿ ಸೇರಿ ಬೆಂಕಿ ಹಚ್ಚಿದ್ದಾರೆಂದು ಸಾವಿಗೆ ಮುನ್ನ ನೀಡಿದ ಹೇಳಿಕೆಯಲ್ಲಿ ಬಾಬುಲಾಲ್ ವಿವರಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಕೈಲಾಶ್ ಮೀನಾನ ಬಂಧನವಾಗಿದೆ. ಈ ಬಗ್ಗೆ ತನಿಖೆ ನಡೆಸಲು ಆರು ತಂಡಗಳನ್ನು ರಚಿಸಲಾಗಿದೆ. ಇತರೆ ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕರೌಲಿಯ ಎಸ್ಪಿ ಮೃದೂಲ್ ಕಚ್ವಾ ಹೇಳಿದ್ದಾರೆ. ಇದೇ ವೇಳೆ ಕೈಲಾಶ್ ಮೀನಾ ಅವರ ಇಡೀ ಕುಟುಂಬ ಈ ಘಟನೆಗೆ ಕಾರಣವಾಗಿದೆ ಎಂದು ಅರ್ಚಕರ ಸಂಬಂಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವಾಲಯದ ಅರ್ಚಕರಿಗೆ ಸುಮಾರು 5.2 ಎಕರೆ ಜಮೀನು ಇದ್ದು ಗ್ರಾಮದ ರಾಧಾ ಕೃಷ್ಣ ದೇವಾಲಯದ ಟ್ರಸ್ಟ್‌ಗೆ ಸೇರಿದ ಜಮೀನು ಇದಾಗಿದೆ. ಆದರೆ ಈ ಭೂಮಿಯನ್ನು ಪ್ರಧಾನ ಅರ್ಚಕರ ಕುಟುಂಬಕ್ಕೆ ನೀಡಲಾಗಿತ್ತು.


Spread the love

LEAVE A REPLY

Please enter your comment!
Please enter your name here